Home » ಅನ್ನದಾತನಿಗೆ ಇನ್ನು ಮುಂದೆ ದೊರೆಯಲಿದೆ ಗೌರವ ಡಾಕ್ಟರೇಟ್ | ಸಾಧನೆ ಮಾಡಿದ ರೈತನ ಮುಕುಟಕ್ಕೆ ಈ ಗೌರವ | ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಈ ರೀತಿಯ ಹೊಸ ಪ್ರಯೋಗ

ಅನ್ನದಾತನಿಗೆ ಇನ್ನು ಮುಂದೆ ದೊರೆಯಲಿದೆ ಗೌರವ ಡಾಕ್ಟರೇಟ್ | ಸಾಧನೆ ಮಾಡಿದ ರೈತನ ಮುಕುಟಕ್ಕೆ ಈ ಗೌರವ | ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಈ ರೀತಿಯ ಹೊಸ ಪ್ರಯೋಗ

by ಹೊಸಕನ್ನಡ
0 comments

Hindu neighbor gifts plot of land

Hindu neighbour gifts land to Muslim journalist

‘ತುತ್ತು ಅನ್ನವ ತಿನ್ನುವ ಮೊದಲು ರೈತನನ್ನು ನೆನೆ’ ಎಂಬ ನಾಣ್ಣುಡಿಯಂತೆ ಇಂದು ನಾವೆಲ್ಲರೂ ಹೊಟ್ಟೆ ತುಂಬುವಷ್ಟು ಊಟ ಮಾಡಿ ಹಸಿವೆ ಇಲ್ಲದೆ ನಿಶ್ಚಿಂತೆಯಿಂದ ನಿದ್ದೆ ಮಾಡುತ್ತಿದ್ದರೆ, ಇದಕ್ಕೆ ರೈತನ ಶ್ರಮದ ಬೆವರೇ ಮುಖ್ಯ ಕಾರಣ. ಇಂತಹ ರೈತನಿಗೆ ನಾವೆಲ್ಲರೂ ಕೃತಜ್ಞರಾಗಿರಬೇಕು.

ರೈತನಿಗೆ ಒಂದು ರೀತಿಯಲ್ಲಿ ಗೌರವ ನೀಡುವ ಕಾರ್ಯಕ್ಕೆ ಇದೀಗ ಸರ್ಕಾರ ಕೈ ಹಾಕಿದೆ. ಕೃಷಿ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿದ ರೈತರೊಬ್ಬರಿಗೆ ಗೌರವ ಡಾಕ್ಟರೇಟ್ ನೀಡಲು ಸರ್ಕಾರ ನಿರ್ಧರಿಸಿದೆ. ರಾಜ್ಯದ ಇತಿಹಾಸದಲ್ಲೇ ಇಂಥದ್ದೊಂದು ಪ್ರಯೋಗ ನಡೆಯುತ್ತಿರುವುದು ಇದೇ ಮೊದಲು.

ಈ ವರ್ಷದಿಂದಲೇ ಇದನ್ನು ಚಾಲ್ತಿಯಲ್ಲಿ ತರಬೇಕಿತ್ತು. ಆದರೆ ಕೊರೋನಾ ಕಾರಣದಿಂದ ಇದನ್ನು ಮುಂದೂಡಲಾಗಿತ್ತು. ಸಾಧಕರನ್ನು ಗುರುತಿಸುವುದು ಈ ವರ್ಷ ಸ್ವಲ್ಪ ಕಷ್ಟವಾಯಿತು. ಆದ್ದರಿಂದ ಮುಂದಿನ ವರ್ಷದಿಂದ ಇದು ಜಾರಿಗೆ ಬರಲಿದೆ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್. ರಾಜೇಂದ್ರ ಪ್ರಸಾದ್ ಹೇಳಿದ್ದಾರೆ.

ಕೃಷಿ ಕ್ಷೇತ್ರದಲ್ಲಿ ಹೊಸ ಹೊಸ ಆವಿಷ್ಕಾರ ಮಾಡಿದ ಮಾದರಿ ರೈತರನ್ನು ಗುರುತಿಸಿ ಗೌರವಿಸುವುದು ಕೃಷಿ ವಿವಿಯ ಉದ್ದೇಶವಾಗಿದೆ. ಯಾವ ವಿವಿಯೂ ಇದುವರೆಗೆ ಇಂತಹ ನಿರ್ಧಾರ ಕೈಗೊಂಡಿರಲಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ.

banner

ಪತ್ರಕರ್ತರ ಜೊತೆ ಮಾತನಾಡಿದ ರಾಜೇಂದ್ರ ಪ್ರಸಾದ್, ಈ ಮಾಹಿತಿ ಹಂಚಿಕೊಂಡಿದ್ದಾರೆ. ಕೃಷಿ ಕ್ಷೇತ್ರದಲ್ಲಿ ಹೊಸ ಆವಿಷ್ಕಾರ ಮಾಡುವ, ವರಮಾನ ಗಳಿಕೆಯ ಹೊಸ ಮಾರ್ಗ ತೋರಿಸುವ ಪ್ರಗತಿಪರ ರೈತರನ್ನು ಗುರುತಿಸಿ ಗೌರವ ಡಾಕ್ಟರೇಟ್ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಇದೇ ವೇಳೆ ಕೇಂದ್ರ ಸರಕಾರದ ಹೊಸ ಶೈಕ್ಷಣಿಕ ನೀತಿ ಕುರಿತೂ ಅವರು ಮಾಹಿತಿ ನೀಡಿದರು. ಇದರ ಕುರಿತಂತೆ ಕೃಷಿ ವಿಶ್ವವಿದ್ಯಾನಿಲಯ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ಕೃಷಿ ವಿಶ್ವವಿದ್ಯಾಲಯದಲ್ಲಿ ಶೇ.70ರಷ್ಟು ಹೊಸ ಶೈಕ್ಷಣಿಕ ರೀತಿಯಲ್ಲಿ ಚಟುವಟಿಕೆಗಳು ನಡೆಯುತ್ತಿವೆ. ಆ ಹಿನ್ನೆಲೆಯಲ್ಲಿ ಹೊಸ ಶೈಕ್ಷಣಿಕ ನೀತಿಗೆ ಯಾವುದೇ ರೀತಿಯ ತೊಂದರೆ ಉಂಟಾಗದು ಎಂದು ಮಾಹಿತಿ ನೀಡಿದರು.

You may also like

Leave a Comment