Home ಕೃಷಿ ರೈತರಿಗೆ ಭರ್ಜರಿ ಸಿಹಿ ಸುದ್ದಿ !! | ಇನ್ನು ಮುಂದೆ ಕೃಷಿಕರಿಗೆ ತಮ್ಮ ಜಮೀನಿನ ಸ್ವಯಂ...

ರೈತರಿಗೆ ಭರ್ಜರಿ ಸಿಹಿ ಸುದ್ದಿ !! | ಇನ್ನು ಮುಂದೆ ಕೃಷಿಕರಿಗೆ ತಮ್ಮ ಜಮೀನಿನ ಸ್ವಯಂ ಸರ್ವೇ ಗೆ ಅವಕಾಶ

Hindu neighbor gifts plot of land

Hindu neighbour gifts land to Muslim journalist

ಆಡಳಿತದಲ್ಲಿ ಸುಧಾರಣೆ ತಂದು ಸಾರ್ವಜನಿಕರಿಗೆ ಸ್ವಯಂ ಸೇವೆಯ ಮುಖಾಂತರ ಸರ್ಕಾರದ ಸೇವಾ ಸೌಲಭ್ಯವನ್ನು ಪಡೆಯಲು ವ್ಯವಸ್ಥೆ ಸೃಷ್ಟಿಸುವುದು ಸರ್ಕಾರದ ಪ್ರಮುಖ ಆದ್ಯತೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಆರ್ ಅಶೋಕ್, ಆಡಳಿತದಲ್ಲಿ ಸುಧಾರಣೆ ತಂದು ನಾಗರೀಕರಿಗೆ ತಮ್ಮ ಹಕ್ಕುಗಾರಿಕೆ ಮೇಲೆ ನಿಯಂತ್ರಣ ಸಾಧಿಸಲು ಅವಶ್ಯಕ ಬದಲಾವಣೆಯನ್ನು ಮಾಡಿ ಸಶಕ್ತಗೊಳಿಸುವುದು ಸರ್ಕಾರದ ಆಡಳಿತ ಸುಧಾರಣೆಯ ಉದ್ದೇಶವಾಗಿದೆ ಎಂದರು.

ಕಂದಾಯ ಇಲಾಖೆಗೆ ಸಂಬಂಧಪಟ್ಟಂತೆ ನಾಗರೀಕರು ದಿಶಾಂಕ್ ಆಪ್ ಡೌನ್‌ಲೋಡ್ ಮಾಡಿಕೊಳ್ಳಿ. ನಂತರ ಅಲ್ಲಿ ಕೇಳುವ ಮಾಹಿತಿಯನ್ನು ಭರ್ತಿ ಮಾಡಿ, ಲಾಗ್ ಇನ್ ಆಗಿ. ನಾಗರೀಕರು ಈ ಕೆಳಕಂಡ ಕಾರಣಗಳಿಗಾಗಿ ಭೂಮಾಪನ ಇಲಾಖೆಗೆ ಅವರ ಸ್ವಂತ ಜಮೀನಿನ ನಕ್ಷೆಗಾಗಿ ಅರ್ಜಿ ಸಲ್ಲಿಸಬಹುದು.

1) 11E ಸ್ಕೆಚ್

2) ತತ್ಕಾಲ್ ಪೋಡಿ

3) ವಿಭಾಗ- ಹಾಲಿ ಹೊಂದಿರುವ ಕೃಷಿ ಜಮೀನಿನಲ್ಲಿ ತಮ್ಮ ಶಾಸನಾತ್ಮಕ ಹಕ್ಕಿನಂತ ವೈಯಕ್ತಿಕ ಭಾಗಾಂಶವನ್ನು ತೋರಿಸುವ ಸಂಬಂಧ ಸ್ಕೆಚ್

4) ಭೂಪರಿವರ್ತನಾ ಪೂರ್ವ ಸ್ಕೆಚ್

ಪ್ರಸ್ತುತ ಜನರಿಗೆ ತಮ್ಮ ಸ್ವಂತ ಖಾಸಗಿ ಜಮೀನುಗಳಲ್ಲಿ ಮೇಲ್ಕಂಡ ಸ್ಕೆಚ್ ಗಳಿಗಾಗಿ ಸಲ್ಲಿಸುವ ಅರ್ಜಿಗಳನ್ನು ಸರ್ಕಾರಿ ಭೂಮಾಪಕರು ಅಥವಾ ಪರವಾನಗಿ ಭೂಮಾಪಕರುಗಳಿಂದ ಸಿದ್ಧಪಡಿಸಲಾಗುತ್ತದೆ.

ಸರ್ಕಾರಿ ಭೂಮಾಪಕರು ಮತ್ತು ಪರವಾನಗಿ ಭೂಮಾಪಕರ ಸಂಖ್ಯೆಯು ಸೀಮಿತವಾಗಿದ್ದು, ಪ್ರತಿ ತಿಂಗಳು ಒಂದು ಲಕ್ಷಕ್ಕಿಂತ ಹೆಚ್ಚಿನ ಅರ್ಜಿಗಳು ನಾಗರೀಕರಿಂದ ಸ್ವೀಕೃತವಾಗುತ್ತವೆ. ಇದರೊಂದಿಗೆ ಹೆಚ್ಚುವರಿಯಾಗಿ ಆರು ಲಕ್ಷಕ್ಕಿಂತ ಹೆಚ್ಚಿನ ಸಂಖ್ಯೆಯ ಅರ್ಜಿಗಳು ಅಳತೆಗಾಗಿ ವಿವಿಧ ಹಂತಗಳಲ್ಲಿ ಬಾಕಿ ಇರುತ್ತವೆ. ಇದರಿಂದಾಗಿ ನಾಗರೀಕರು ತಮ್ಮ ಸ್ವಂತ ಜಮೀನಿನಲ್ಲಿ ಯಾವುದೇ ರೀತಿಯ ಕ್ರಯ ಮತ್ತು ವಿಭಾಗ ಮಾಡಿಸಿಕೊಳ್ಳಲು ಅಗತ್ಯವಿರುವ ಸ್ಕೆಚ್ ಗಾಗಿ ಹಲವಾರು ತಿಂಗಳುಗಳು ಮತ್ತು ಕೆಲವೊಮ್ಮೆ ವರ್ಷದವರೆಗೆ ಕಾಯಬೇಕಾಗುತ್ತದೆ.

ಇದೆಲ್ಲ ಸಮಸ್ಯೆಗೆ ಪರಿಹಾರ ನೀಡಲು ನಾಗರಿಕರೇ ತಮ್ಮ ಜಮೀನಿಗೆ ಸ್ವಂತ ನಕ್ಷೆ ಮಾಡಿಕೊಳ್ಳಲು ಕಂದಾಯ ಇಲಾಖೆ ಯೋಜನೆಯೊಂದನ್ನು ರೂಪಿಸಿದೆ. 11E ಸ್ಕೆಚ್, ತತ್ಕಾಲ ಪೋಡಿ ಇವುಗಳನ್ನು ಜನರು ಸ್ವಂತ ಜಮೀನಿಗೆ ತಾವೇ ಮಾಡಿಕೊಳ್ಳಲು ಅವಕಾಶ ನೀಡುತ್ತಿದ್ದೇವೆ. ಇದರಿಂದ ಸರ್ವೇ ವಿಳಂಬವಾಗಿ, ಸಾರ್ವಜನಿಕರಿಗೆ ಆಗುತ್ತಿದ್ದ ಸಮಸ್ಯೆ ಬಗೆಹರಿಯುತ್ತದೆ ಎಂದು ಹೇಳಿದರು.