Home ದಕ್ಷಿಣ ಕನ್ನಡ Dakshina Kannada: ‘ದಕ್ಷಿಣ ಕನ್ನಡ ಜಿಲ್ಲೆಯ ಈ ಒಂದು ಸಮಾಜದ 1 ಲಕ್ಷ ಹುಡುಗಿಯರು ವೇಶ್ಯೇಯರು’...

Dakshina Kannada: ‘ದಕ್ಷಿಣ ಕನ್ನಡ ಜಿಲ್ಲೆಯ ಈ ಒಂದು ಸಮಾಜದ 1 ಲಕ್ಷ ಹುಡುಗಿಯರು ವೇಶ್ಯೇಯರು’ – ಹಿಂದೂ ಹೆಣ್ಮಕ್ಕಳ ಬಗ್ಗೆ ಪಂಜ ಉಪವಲಯ ಅಧಿಕಾರಿಯಿಂದ ಶಾಕಿಂಗ್ ಸ್ಟೇಟ್ಮೆಂಟ್!!

Hindu neighbor gifts plot of land

Hindu neighbour gifts land to Muslim journalist

Dakshina Kannada: ‘ದಕ್ಷಿಣ ಕನ್ನಡದಲ್ಲಿ ಈ ಒಂದು ಸಮಾಜಕ್ಕೆ ಸೇರಿದ ಒಂದು ಲಕ್ಷ ಹೆಣ್ಣುಮಕ್ಕಳು ವೇಶ್ಯಯರು ಇದ್ದಾರೆ’ ಎಂದು ಪಂಜ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಹಿಂದೂ ಹೆಣ್ಣುಮಕ್ಕಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾನೆ. ಈ ಬಗ್ಗೆ ಇದೀಗ ಹಿಂದೂ ಸಂಘಟನೆಗಳು ಭಾರೀ ಆಕ್ರೋಶ ವ್ಯಕ್ತಪಡಿಸಿವೆ.

ಹೌದು, ಸರ್ಕಾರಿ ಅಧಿಕಾರಿ ( Government Officer )ಯಾದ ಪಂಜ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಹಿಂದೂ ( Hindu ) ಹೆಣ್ಣುಮಕ್ಕಳ ಬಗ್ಗೆ ನಾಲಿಗೆ ಹರಿಬಿಟ್ಟದ್ದಾನೆ. ಹಿಂದೂ ಧರ್ಮದ ಒಂದು ಸಮಾಜಕ್ಕೆ ಸೇರಿದ ಒಂದು ಲಕ್ಷ ಹೆಣ್ಣುಮಕ್ಕಳು ವೇಶ್ಯೆಯರಿದ್ದಾರೆ ಎಂದು ಹೇಳಿಕೆ ನೀಡಿದ್ದು, ಹಿಂದೂ ಸಂಘಟನೆಯ ಕಾರ್ಯಕರ್ತ ಸುರೇಶ್ ಎಂಬುವರ ಜೊತೆ ದೂರವಾಣಿ ಮುಖಾಂತರ ಮಾತನಾಡುವಾಗ ಈ ಸ್ಟೇಟ್ಮೆಂಟ್ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಆಡಿಯೋದಲ್ಲಿ ಏನಿದೆ?
ದೂರವಾಣಿಯಲ್ಲಿ ಮಾತನಾಡುವಾಗ “ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಸಮಾಜಕ್ಕೆ ಸೇರಿದ ಒಂದು ಲಕ್ಷ ಹುಡುಗಿಯರು ವೇಶ್ಯೆಯಾಗಿದ್ದಾರೆ. ಇದಕ್ಕೆ ನನ್ನ ಬಳಿ 10,000 ದಾಖಲೆಗಳಿವೆ. ಹಿಂದುತ್ವದ ಹುಡುಗರು ವೇಶ್ಯೆಯರನ್ನಾಗಿ ಮಾಡಿದ್ದಾರೆ. ಒಂದು ಸಮಾಜದ ಒಂದು ಲಕ್ಷ ಹುಡುಗಿಯರು ವೇಶ್ಯೆಯರಾಗಲು ಹಿಂದೂ ಸಂಘಟನೆಯ ಯುವಕರು ಕಾರಣರಾಗಿದ್ದಾರೆ. ಭಜನೆ ಮಾಡಿದ ಹಿಂದೂ ಹುಡುಗಿಯರನ್ನು ಮರದ ಅಡಿಯಲ್ಲಿ ಮಲಗಿಸಿದವರು ಹಿಂದೂ ಹುಡುಗರು” ಎಂದು ಹಿಂದೂ ಹೆಣ್ಣುಮಕ್ಕಳ ಬಗ್ಗೆ ತೀರ ಅವಹೇಳನಕಾರಿಯಾಗಿ ಮಾತನಾಡಿದ್ದಾನೆ.

ಸದ್ಯ ಸಂಜೀವ ಪೂಜಾರಿ ಕಾಣಿಯೂರು ಹೇಳಿರುವ ಆಡಿಯೋ ಸಾಮಾಜಿ ಜಾಲತಾಣದಲ್ಲಿ ವೈರಲ್​​ ಆಗಿದೆ. ಆಡಿಯೋ ವೈರಲ್ ಬೆನ್ನಲ್ಲೇ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಬೆಳ್ಳಾರೆ ಪೊಲೀಸ್​ ಠಾಣೆ ಸೇರಿದಂತೆ ಎರಡು ಕಡೆ ಪ್ರತ್ಯೇಕ ದೂರು ದಾಖಲಿಸಿದ್ದಾರೆ.

ಅಂದಹಾಗೆ ಪಂಜ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಎರಡು ದಿನಗಳ ಹಿಂದೆ ತನ್ನ ಫೇಸ್ ಬುಕ್ ಖಾತೆಯಲ್ಲಿ ಮುಸ್ಲಿಮರ ಪರವಾಗಿ ಪೋಸ್ಟ್ ಹಾಕಿದ್ದನು. ಸಹಾಯ ಮಾಡುವುದರಲ್ಲಿ ಮುಸ್ಲಿಮರು ಎತ್ತಿದ ಕೈ ಎಂದು ಪೋಸ್ಟ್ ಹಾಕಿದ್ದನು. ಈ ಪೋಸ್ಟ್ ವಿರೋಧಿಸಿ ಹಿಂದೂ ಕಾರ್ಯಕರ್ತ ಸುರೇಶ್ ಕಾಸರಗೋಡು ಅವರು ಸಂಜೀವ್​ ಪೂಜಾರಿಗೆ ಕರೆ ಮಾಡಿದ್ದರು.