Home ದಕ್ಷಿಣ ಕನ್ನಡ ನೆಲ್ಯಾಡಿ:ಬೈಕ್ ಹಾಗೂ ಲಾರಿ ನಡುವೆ ಭೀಕರ ರಸ್ತೆ ಅಪಘಾತ | ಬೈಕ್ ಸವಾರ ಇಚ್ಲಂಪಾಡಿ ನಿವಾಸಿ...

ನೆಲ್ಯಾಡಿ:ಬೈಕ್ ಹಾಗೂ ಲಾರಿ ನಡುವೆ ಭೀಕರ ರಸ್ತೆ ಅಪಘಾತ | ಬೈಕ್ ಸವಾರ ಇಚ್ಲಂಪಾಡಿ ನಿವಾಸಿ ಸಾವು-ಸಹ ಸವಾರ ಗಂಭೀರ

Hindu neighbor gifts plot of land

Hindu neighbour gifts land to Muslim journalist

ನೆಲ್ಯಾಡಿ:ಬೈಕ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ ಸವಾರ ಮೃತಪಟ್ಟು, ಸಹಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಎಂಬಲ್ಲಿ ನಡೆದಿದೆ.

ಮೃತ ಬೈಕ್ ಸವಾರನನ್ನು ಇಚ್ಲಂಪಾಡಿ ನಿವಾಸಿ ಆಲ್ವಿನ್ ಹಾಗೂ ಗಂಭೀರ ಗಾಯಗೊಂಡ ಸಹಸವಾರನನ್ನು ನೆಲ್ಯಾಡಿ ಪಡ್ಡಡ್ಕ ನಿವಾಸಿ ಸೆಬಿನ್ ಎಂದು ಗುರುತಿಸಲಾಗಿದೆ.

ಸೆಬಿನ್ ನೆಲ್ಯಾಡಿಯಲ್ಲಿ ಕೊರಿಯರ್ ಸರ್ವಿಸ್ ನಡೆಸುತ್ತಿದ್ದೂ, ಅದರಂತೆ ನಿನ್ನೆ ರಾತ್ರಿ ಕೊರಿಯರ್ ಹಿಡಿದುಕೊಂಡು ಆಲ್ವಿನ್ ಜೊತೆ ಬೈಕ್ ನಲ್ಲಿ ತೆರಳುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ಆಲ್ವಿನ್ ಪ್ರಾಣಪಕ್ಷಿ ಹಾರಿಹೋಗಿತ್ತು.