Home » ಮಾಣಿ:ಶಾಲೆ ಬಿಟ್ಟು ತಂದೆಯೊಂದಿಗೆ ಬೈಕಿನಲ್ಲಿ ಮನೆಗೆ ತೆರಳುತ್ತಿದ್ದ ಬಾಲಕನಿಗೆ ರಸ್ತೆ ಮಧ್ಯೆಯೇ ಹೊಂಚು ಹಾಕಿದ್ದ ಜವರಾಯ!!ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬಾಲಕ ಆಸ್ಪತ್ರೆಯಲ್ಲಿ ಸಾವು

ಮಾಣಿ:ಶಾಲೆ ಬಿಟ್ಟು ತಂದೆಯೊಂದಿಗೆ ಬೈಕಿನಲ್ಲಿ ಮನೆಗೆ ತೆರಳುತ್ತಿದ್ದ ಬಾಲಕನಿಗೆ ರಸ್ತೆ ಮಧ್ಯೆಯೇ ಹೊಂಚು ಹಾಕಿದ್ದ ಜವರಾಯ!!ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬಾಲಕ ಆಸ್ಪತ್ರೆಯಲ್ಲಿ ಸಾವು

0 comments

Hindu neighbor gifts plot of land

Hindu neighbour gifts land to Muslim journalist

ಮಂಗಳೂರು ಬೆಂಗಳೂರು ರಾಷ್ಟೀಯ ಹೆದ್ದಾರಿಯ ಗಡಿಯಾರ ಸಮೀಪದ ಕೆರೆ ಎಂಬಲ್ಲಿ ಫೆ.07 ರಂದು ಬೈಕ್ ಹಾಗೂ ಲಾರಿ ನಡುವೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬಾಲಕ ಆಸ್ಪತ್ರೆಯಲ್ಲಿ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಮೃತ ಬಾಲಕನನ್ನು ಗಡಿಯಾರ ನಿವಾಸಿ ದಿನೇಶ್ ಎಂಬವರ ಪುತ್ರ 6ನೇ ತರಗತಿ ವಿದ್ಯಾರ್ಥಿ ಅದ್ವಿತ್ ಎಂದು ಗುರುತಿಸಲಾಗಿದೆ.

ಘಟನೆ ವಿವರ: ಎಂದಿನಂತೆ ಸಂಜೆ ಶಾಲೆ ಬಿಟ್ಟ ಬಳಿಕ ತನ್ನ ತಂದೆಯೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದ ಸಂದರ್ಭ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದು ಪರಾರಿಯಾಗಿತ್ತು. ಘಟನೆಯಿಂದ ಗಂಭೀರ ಗಾಯಗೊಂಡ ಬಾಲಕನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.

ಇತ್ತ ಅಪಘಾತ ನಡೆಸಿ ಪರಾರಿಯಾಗಿದ್ದ ಲಾರಿಯನ್ನು ಸ್ಥಳೀಯರು ಬೆನ್ನಟ್ಟಿ ನೆಲ್ಯಾಡಿ ಸಮೀಪ ಪತ್ತೆ ಹಚ್ಚಿದ್ದರು.

banner

You may also like

Leave a Comment