Home » ಮುಂಜಾನೆ ತಾಯಿಯ ಮಡಿಲಿಂದ ಎದ್ದು ಹೋದ ಯುವಕ ಬಾರದ ಲೋಕಕ್ಕೇ ಪ್ರಯಾಣಿಸಿದ| ಬೆಂಗಳೂರಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಡಬದ ಯುವಕ ಮೃತ್ಯು-ಇನ್ನೋರ್ವನಿಗೆ ಗಾಯ

ಮುಂಜಾನೆ ತಾಯಿಯ ಮಡಿಲಿಂದ ಎದ್ದು ಹೋದ ಯುವಕ ಬಾರದ ಲೋಕಕ್ಕೇ ಪ್ರಯಾಣಿಸಿದ| ಬೆಂಗಳೂರಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಡಬದ ಯುವಕ ಮೃತ್ಯು-ಇನ್ನೋರ್ವನಿಗೆ ಗಾಯ

0 comments

Hindu neighbor gifts plot of land

Hindu neighbour gifts land to Muslim journalist

ಕಡಬ: ಉದ್ಯೋಗದ ನಿಮಿತ್ತ ಸ್ನೇಹಿತನೊಂದಿಗೆ ಬೆಂಗಳೂರಿಗೆ ತೆರಳುತ್ತಿದ್ದಾಗ ಬೈಕ್ ಅಪಘಾತ ಸಂಭವಿಸಿ ಆಲಂಕಾರು ನಿವಾಸಿ ಯುವಕನೊಬ್ಬ ಮೃತಪಟ್ಟ ಘಟನೆ ನಡೆದಿದ್ದು, ಮೃತ ಯುವಕನನ್ನು ಆಲಂಕಾರು ನಿವಾಸಿ ರಾಜೀವಿ ಎಂಬವರ ಪುತ್ರ ನಂದೀಪ್(21) ಎಂದು ಗುರುತಿಸಲಾಗಿದೆ.

ಮೃತ ಯುವಕ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರ ಉದ್ಯೋಗಿಯಾಗಿದ್ದು, ಜನವರಿ 31 ರಂದು ಮುಂಜಾನೆ ಹಳೇನೇರೆಂಕಿಯ ತನ್ನ ಸ್ನೇಹಿತನೊಂದಿಗೆ ಬೆಂಗಳೂರಿಗೆ ಬೈಕ್ ನಲ್ಲಿ ತೆರಳಿದ್ದಾರೆ. ಬೆಂಗಳೂರು ತಲುಪುತ್ತಿದ್ದಂತೆ ಆಟೋ ರಿಕ್ಷಾ ಒಂದಕ್ಕೆ ಯುವಕರು ಚಲಿಸುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಯುವಕ ನಂದೀಪ್ ರಸ್ತೆಗೆಯಲ್ಪಟ್ಟಿದ್ದಾರೆ. ಈ ಸಂದರ್ಭದಲ್ಲಿ ಯುವಕ ನಂದೀಪ್ ಮೇಲೆಯೇ ಲಾರಿ ಯೊಂದು ಚಲಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಸಹಸವಾರ ನಂದೀಪ್ ಸ್ನೇಹಿತ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ನಂದೀಪ್ ತಾಯಿ ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.

You may also like

Leave a Comment