Home ದಕ್ಷಿಣ ಕನ್ನಡ ಬಂಟ್ವಾಳ : ಬಸ್ಸಿನಿಂದ ಇಳಿದು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ಯಮ ಸ್ವರೂಪಿಯಾಗಿ ಬಂದು ಡಿಕ್ಕಿ ಹೊಡೆದ...

ಬಂಟ್ವಾಳ : ಬಸ್ಸಿನಿಂದ ಇಳಿದು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ಯಮ ಸ್ವರೂಪಿಯಾಗಿ ಬಂದು ಡಿಕ್ಕಿ ಹೊಡೆದ ಕಾರು | ವಿದ್ಯಾರ್ಥಿಗಳಿಬ್ಬರ ಸ್ಥಿತಿ ಗಂಭೀರ

Hindu neighbor gifts plot of land

Hindu neighbour gifts land to Muslim journalist

ಕಾರೊಂದು ಚಾಲಕನ ನಿಯಂತ್ರಣ ತಪ್ಪಿ , ಬಸ್ ಇಳಿದು ಮನೆಯ ಕಡೆಗೆ ಹೋಗುತ್ತಿದ್ದ ವಿದ್ಯಾರ್ಥಿಗಳಿಗೆ ಢಿಕ್ಕಿ ಹೊಡೆದು ಕಂದಕಕ್ಕೆ ಉರುಳಿಬಿದ್ದು, ವಿದ್ಯಾರ್ಥಿಗಳಿಬ್ಬರು ಗಂಭೀರ ಗಾಯಗೊಂಡ ಘಟನೆ ನಿನ್ನೆ ಸಂಜೆ ರಾಷ್ಟ್ರೀಯ ಹೆದ್ದಾರಿ 75ರ ಪಾಣೆಮಂಗಳೂರಿನಲ್ಲಿ ನಡೆದಿದೆ.

ಸಜೀಪ ಕಾಲೇಜಿನ ವಿದ್ಯಾರ್ಥಿಗಳಾದ ಮಹಮ್ಮದ್ ಸಲೀಂ ಹಾಗೂ ಸಿಂಚನ ಗಾಯಗೊಂಡ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ.

ಈ ಘಟನೆಯಿಂದ ವಿದ್ಯಾರ್ಥಿ ಮಹಮ್ಮದ್ ಸಲೀಂ ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಿಂಚನ ಎಂಬ ವಿದ್ಯಾರ್ಥಿನಿಗೂ ಗಾಯವಾಗಿದ್ದು ಅವಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಮೆಲ್ಕಾರ್ ಟ್ರಾಫಿಕ್ ಎಸ್.ಐ.ರಾಜೇಶ್ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಪಾತಕ್ಕೆ ಉರುಳಿದ ಕಾರನ್ನು ಕ್ರೇನ್ ಬಳಸಿ ಮೇಲಕ್ಕೆತ್ತಲಾಯಿತು. ಕಾರು ಸಂಪೂರ್ಣ ಜಖಂಗೊಂಡಿದೆಯಾದರೂ ಕಾರಿನಲ್ಲಿದ್ದ ಚಾಲಕ ಹಾಗೂ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.