Home ದಕ್ಷಿಣ ಕನ್ನಡ ಬಂಟ್ವಾಳ : ಶಾಲೆಗೆ ತೆರಳುತ್ತಿದ್ದ ಮಕ್ಕಳ ಅಪಹರಣ ಯತ್ನ ಆರೋಪ | ಪೊಲೀಸರಿಂದ ತನಿಖೆ

ಬಂಟ್ವಾಳ : ಶಾಲೆಗೆ ತೆರಳುತ್ತಿದ್ದ ಮಕ್ಕಳ ಅಪಹರಣ ಯತ್ನ ಆರೋಪ | ಪೊಲೀಸರಿಂದ ತನಿಖೆ

Hindu neighbor gifts plot of land

Hindu neighbour gifts land to Muslim journalist

ಬಂಟ್ವಾಳ: ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ಕುಟ್ಟಿಕಳ ಸಮೀಪ ಶಾಲೆಗೆ ತೆರಳುತ್ತಿದ್ದ ಮಕ್ಕಳನ್ನು ಅಪಹರಣ ಮಾಡಲು ಯತ್ನಿಸಿದ ಬಗ್ಗೆ ಗಂಭೀರ ಆರೋಪ ಕೇಳಿ ಬಂದಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬುಧವಾರ (ಡಿ‌.14) ರಂದು ಇಬ್ಬರು ಮಕ್ಕಳ ತಮ್ಮ ಮನೆಯಿಂದ ಕುಟ್ಟಿಕಳ ಹಿ.ಪ್ರಾ.ಶಾಲೆಗೆ ಆಗಮಿಸುತ್ತಿದ್ದ ವೇಳೆ ಕಾರೊಂದರಲ್ಲಿ ಬಂದ ವ್ಯಕ್ತಿ ಮಕ್ಕಳ ಅಂಗಿ ಎಳೆಯಲು ಯತ್ನಿಸಿದ್ದು, ಈ ವೇಳೆ ಮಕ್ಕಳ ಅಂಗಿಯ ಗುಬ್ಬಿಗಳು ಎದ್ದು ಹೋಗಿದೆ.

ಘಟನೆಯ ಕುರಿತು ಮಕ್ಕಳು ತಕ್ಷಣ ಪೋಷಕರಿಗೆ ಮಾಹಿತಿ ನೀಡಿದ್ದು, ಬಳಿಕ ಅವರು ಬಂಟ್ವಾಳ ಗ್ರಾಮಾಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳೀಯ ಸಿಸಿ ಕ್ಯಾಮರಾಗಳನ್ನು ಪರಿಶೀಲಿಸಿದ ಪೊಲೀಸರು ಘಟನೆಯ ಸತ್ಯಾಸತ್ಯತೆಯ ಕುರಿತು ತನಿಖೆ ನಡೆಸುತ್ತಿದ್ದಾರೆ.