Home » ಬಂಟ್ವಾಳ : ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ವಿದ್ಯಾರ್ಥಿ

ಬಂಟ್ವಾಳ : ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ವಿದ್ಯಾರ್ಥಿ

by Praveen Chennavara
0 comments

ಬಂಟ್ವಾಳ : ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದು ನೀರುಪಾಲಾದ ವಿದ್ಯಾರ್ಥಿಯನ್ನು ಸಾರ್ವಜನಿಕರು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿದ ಘಟನೆ ಬರಿಮಾರು ಗ್ರಾಮದ ಕಾಗೆಕಾನ ಎಂಬಲ್ಲಿ ನಡೆದಿದೆ.

ಬರಿಮಾರ್ ಗ್ರಾಮದ ಪಾಪೆತ್ತಿಮಾರು ನಿವಾಸಿ ರಕ್ಷಣ್(16) ನೀರಿಗೆ ಬಿದ್ದ ವಿದ್ಯಾರ್ಥಿ.

ಈತ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿದ್ದು, ಕಾಲೇಜ್ ಗೆ ರಜೆ ಇದ್ದ ಹಿನ್ನೆಲೆಯಲ್ಲಿ ನೇತ್ರಾವತಿ ನದಿ ಬಳಿಗೆ ಹೋಗಿದ್ದಾಗ ಈ ಘಟನೆ ಸಂಭವಿಸಿದೆ.

ಬಳಿಕ ಸ್ಥಳೀಯರು ಮತ್ತು ಅಗ್ನಿಶಾಮಕದಳವರು ವಿದ್ಯಾರ್ಥಿಯನ್ನು ಕಾರ್ಯಾಚರಣೆ ನಡೆಸಿ ರಕ್ಷಿಸಿ ಚಿಕಿತ್ಸೆಗಾಗಿ ತುಂಬೆ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ

banner

You may also like

Leave a Comment