Home latest ಸುಳ್ಯ : ಎಪಿಎಂಸಿ ಕಟ್ಟಡದಲ್ಲಿ ವ್ಯಕ್ತಿಯೋರ್ವರ ಶವ ಪತ್ತೆ| ಸ್ಥಳಕ್ಕೆ ಪೊಲೀಸರ ಭೇಟಿ

ಸುಳ್ಯ : ಎಪಿಎಂಸಿ ಕಟ್ಟಡದಲ್ಲಿ ವ್ಯಕ್ತಿಯೋರ್ವರ ಶವ ಪತ್ತೆ| ಸ್ಥಳಕ್ಕೆ ಪೊಲೀಸರ ಭೇಟಿ

Hindu neighbor gifts plot of land

Hindu neighbour gifts land to Muslim journalist

ಸುಳ್ಯ : ಎಪಿಎಂಸಿ ಕಟ್ಟಡದಲ್ಲಿ ಮೃತಪಟ್ಟ ವ್ಯಕ್ತಿಯೋರ್ವರ ಶವ ಇಂದು ಬೆಳಗ್ಗೆ ಪತ್ತೆಯಾಗಿದೆ. ಸುಳ್ಯ ತಾಲೂಕಿನ ಬೆಳ್ಳಾರೆ ಮುಖ್ಯ ಪೇಟೆಯಲ್ಲಿ ಪತ್ತೆಯಾಗಿದೆ.

ಬೆಳ್ಳಾರೆ ಪೇಟೆಯಲ್ಲಿ ಕೂಲಿ ಕೆಲಸಕ್ಕೆ ಹೋಗುವವರು ಇಲ್ಲಿನ ಎಪಿಎಂಸಿ ಸಂತೆ ಮಾರುಕಟ್ಟೆಯಲ್ಲಿ ಶವ ಬಿದ್ದಿರುವುದನ್ನು ಕಂಡು ಬೆಳ್ಳಾರೆ ಠಾಣೆಗೆ ಮಾಹಿತಿ ನೀಡಿದ್ದಾರೆ. ಮೃತ ವ್ಯಕ್ತಿ ತಮಿಳುನಾಡಿನ ಸೇಲಂ ಮೂಲದ ವ್ಯಕ್ತಿ ಗಣೇಶ ಎಂ ( 38) ಎನ್ನಲಾಗಿದೆ. ತೋಟದ ಕೆಲಸ ಮಾಡಿಕೊಂಡವರು ಎಂದು ತಿಳಿದು ಬಂದಿದೆ. ವಿಪರೀತ ಮದ್ಯಪಾನ ಮಾಡಿ ಯಾವುದೇ ಆಹಾರ ಸೇವಿಸದೇ ತಿರುಗುತ್ತಿದ್ದ ಎನ್ನಲಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ‌ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.