Home ದಕ್ಷಿಣ ಕನ್ನಡ ಬೆಳ್ಳಾರೆಯ ಯುವ ಉದ್ಯಮಿ ನವೀನ್ ಕಾಮಧೇನು ಅಪಹರಣ ಪ್ರಕರಣ | ಕಾಂಗ್ರೆಸ್ ನಾಯಕಿ ದಿವ್ಯಪ್ರಭಾ ಚಿಲ್ತಡ್ಕ...

ಬೆಳ್ಳಾರೆಯ ಯುವ ಉದ್ಯಮಿ ನವೀನ್ ಕಾಮಧೇನು ಅಪಹರಣ ಪ್ರಕರಣ | ಕಾಂಗ್ರೆಸ್ ನಾಯಕಿ ದಿವ್ಯಪ್ರಭಾ ಚಿಲ್ತಡ್ಕ ಸಹಿತ 6 ಜನರ ವಿರುದ್ಧ ಪ್ರಕರಣ

Hindu neighbor gifts plot of land

Hindu neighbour gifts land to Muslim journalist

ಸುಳ್ಯ : ಬೆಳ್ಳಾರೆಯ ಪ್ರತಿಷ್ಟಿತ ಕಾಮಧೇನು ಜ್ಯುವೆಲ್ಲರ್ಸ್ ಮಾಲಕ ನವೀನ್ ಗೌಡ ಕಾಮಧೇನು ಎಂವರನ್ನು ಅಪಹರಿಸಿದ ಆರೋಪದಡಿ 6 ಜನರ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿ. 19 ರಂದು ಮಧ್ಯಾಹ್ನ ಆಂಬ್ಯುಲೆನ್ಸ್ ಸಹಿತ ಕೆಲವು ವಾಹನಗಳಲ್ಲಿ ಬಂದ ತಂಡವೊಂದು ಬೆಳ್ಳಾರೆ ಸಮೀಪದ ಕಾವಿನ ಮೂಲೆಯಲ್ಲಿರುವ ತನ್ನ ಮನೆಯ ಅಂಗಲದಲ್ಲಿದ್ದ ನವೀನ್ ಗೌಡ ರವರನ್ನು ಬಲವಂತವಾಗಿ ಅಂಬ್ಯುಲೆನ್ಸ್ ನಲ್ಲಿ ಹಾಕಿ ಕರೆದುಕೊಂಡು ಹೋಗಿತ್ತು.

ಅಪಹರಣಕ್ಕೊಳಗಾದ ನವೀನ್ ಅವರ ತಂದೆ ಮಾಧವ ಗೌಡ, ನವಿನ್ ಅವರ ಪತ್ನಿ ಸ್ಪಂದನ ಚಿಲ್ತಡ್ಕ, ಕಾಂಗ್ರೆಸ್ ಪಕ್ಷದ ಮಹಿಳಾ ನಾಯಕಿ ಹಾಗೂ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ದಿವ್ಯ ಪ್ರಭಾ ಚಿಲ್ಲಡ್ಕ (ಸ್ಪಂದನ ರವರ ತಾಯಿ), ಪರುಶುರಾಮ್ , ಸ್ಪರ್ಶಿತ್ ಹಾಗೂ ನವೀನ್ ರೈ ತಂಬಿನಮಕ್ಕಿ ಪ್ರಕರಣದ ಆರೋಪಿಗಳು.

ನವೀನ್ ಅವರ ತಾಯಿ ನೀಡಿದ ದೂರಿನಂತೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನವೀನ್ ಕುಮಾರ್ ಹಾಗೂ ಆತನ ಪತ್ನಿ ಸ್ಪಂದನಳ ಮಧ್ಯೆ ಸುಮಾರು 3 ತಿಂಗಳಿನಿಂದ ವೈಮನಸ್ಸು ಉಂಟಾಗಿ ಸ್ಪಂದನಳು ತವರು ಮನೆಗೆ ಹೋಗಿದ್ದರು, ಡಿ 18 ರಂದು ಸೊಸೆ ಸ್ಪಂದನ, ಆಕೆಯ ಹೆತ್ತವರಾದ ಪರಶುರಾಮ, ದಿವ್ಯಪ್ರಭಾ ಚಿಲ್ಲಡ್ಕ ತಮ್ಮಸ್ಪರ್ಶಿತ್ತಾಗೂ ಸಂಬಂಧಿಕರು ಬಂದು ಮಾತುಕತೆ ನಡೆಸಿದ್ದಾರೆ, ಆ ವೇಳೆ ನವೀನ್ ಕುಮಾರ್ ಪತ್ನಿ ಸ್ಪಂದನಳು ಬೇಡ ಎಂಬುದಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

https://youtu.be/cCgqbE9pVKohttps://youtu.be/cCgqbE9pVKo