Home ದಕ್ಷಿಣ ಕನ್ನಡ ಬೆಳ್ತಂಗಡಿ : ಬಸ್ ಬೈಕ್ ಭೀಕರ ಅಪಘಾತ | ಓರ್ವ ಸಾವು, ಇನ್ನೋರ್ವ ಗಂಭೀರ

ಬೆಳ್ತಂಗಡಿ : ಬಸ್ ಬೈಕ್ ಭೀಕರ ಅಪಘಾತ | ಓರ್ವ ಸಾವು, ಇನ್ನೋರ್ವ ಗಂಭೀರ

Hindu neighbor gifts plot of land

Hindu neighbour gifts land to Muslim journalist

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಭೀಕರ ಅಪಘಾತವಾಗಿದೆ. ಬೆಳ್ತಂಗಡಿಯ ಲಾಯಿಲ ಕೊಯ್ಯುರು ಕ್ರಾಸ್ ತಿರುವು ರಸ್ತೆಯಲ್ಲಿ ಬೈಕ್ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಅಪಘಾತ ಸಂಭವಿಸಿದೆ.

ಇದೀಗ ತಾನೇ ನಡೆದ ಅಪಘಾತದಲ್ಲಿ ಅಪಘಾತದಲ್ಲಿ ಓರ್ವ ಸ್ಥಳದಲ್ಲಿಯೇ ಸಾವಿಗೀಡಾಗಿದ್ದು ಇನ್ನೋರ್ವ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಉಜಿರೆಯ ಖಾಸಗಿ ಕಂಪೆನಿಯಲ್ಲಿ ಕೆಲಸ ಮುಗಿಸಿ ತನ್ನ ಪಲ್ಸರ್ ಬೈಕ್ ನಲ್ಲಿ ಇಬ್ಬರು ಹುಡುಗರು ಬೆಳ್ತಂಗಡಿ ಕಡೆ ಬರುತ್ತಿದ್ದರು. ಅವರನ್ನು ವಿಜಯ್ ಮತ್ತು ಶೈಲು ಎಂದು ಗುರುತಿಸಲಾಗಿದೆ. ಅವರಿಗೆ ಬೆಳ್ತಂಗಡಿಯಿಂದ ಧರ್ಮಸ್ಥಳ ಕಡೆ ಸಂಚರಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಬೈಕ್ನಲ್ಲಿದ್ದ ವಿಜಯ್ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಬೈಕಿನ ಹಿಂಬದಿಯಲ್ಲಿದ್ದ ಶೈಲು ಅವರಿಗೆ ಅವರಿಗೆ ಗಂಭೀರ ಗಾಯಗಳಾಗಿದೆ.

ದುರದೃಷ್ಟಕರ ವಿಷಯ ಏನೆಂದರೆ ಈ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಹುಡುಗರು ಹೆಲ್ಮೆಟ್ ಧರಿಸಿದ್ದರು. ಅಪಘಾತದ ರಭಸಕ್ಕೆ ಹೆಲ್ಮೆಟ್ ಕೆಳಕ್ಕೆ ಬಿದ್ದಿದೆ ಎನ್ನಲಾಗಿದೆ.

ಈಗಾಗಲೇ ಸ್ಥಳಕ್ಕೆ ಪೋಲೀಸರು ಆಗಮಿಸಿ ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಳಿಸಿಕೊಟ್ಟಿದ್ದಾರೆ, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.