Home ದಕ್ಷಿಣ ಕನ್ನಡ ಬೆಳ್ತಂಗಡಿ : ಬೈಕ್ ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ ; ಬೈಕ್ ಸವಾರ ಸ್ಥಳದಲ್ಲೇ...

ಬೆಳ್ತಂಗಡಿ : ಬೈಕ್ ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ ; ಬೈಕ್ ಸವಾರ ಸ್ಥಳದಲ್ಲೇ ಸಾವು

Hindu neighbor gifts plot of land

Hindu neighbour gifts land to Muslim journalist

ಬೆಳ್ತಂಗಡಿ : ತಾಲೂಕಿನ ಉಪ್ಪಿನಂಗಡಿ ಹಾದುಹೋಗುವ ರಸ್ತೆಯ ಕುಪ್ಪೆಟ್ಟಿ ಎಂಬಲ್ಲಿ ಬೈಕ್ ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಮೃತರನ್ನು ಉಳಿ ಗ್ರಾಮದ ನಿವಾಸಿ ಸಫ್ವಾನ್ ಎಂದು ಗುರುತಿಸಲಾಗಿದೆ.

ಉಪ್ಪಿನಂಗಡಿಯಿಂದ ಬೆಳ್ತಂಗಡಿಗೆ ಸಾಗುತ್ತಿದ್ದ ಟಿಪ್ಪರ್ ಹಾಗೂ ಬೆಳ್ತಂಗಡಿಯಿಂದ ಉಪ್ಪಿನಂಗಡಿ ಕಡೆಗೆ ಸಾಗುತ್ತಿದ್ದ ಬೈಕ್ ನಡುವೆ ಇಂದು ಬೆಳಗಿನ ಜಾವ 9:00ಗಂಟೆಗೆ ಅಪಘಾತ ನಡೆದಿದೆ.

ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಟಿಪ್ಪರ್ ಚಾಲಕ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪುಂಜಾಲಕಟ್ಟೆಯಲ್ಲಿ ನಡೆದ ಬೈಕ್ ಗಳ ನಡುವಿನ ಅಪಘಾತದಲ್ಲಿ ಮೃತಪಟ್ಟ ಶಫೀಕ್, ಸಫ್ವಾನ್ ಗೆ ಸೋದರ ಸಂಬಂಧಿಯಾಗಿದ್ದ. ಹೀಗಾಗಿ, ಅಪಘಾತವಾದ ವಿಷಯ ತಿಳಿದು ಆತನನ್ನು ನೋಡಲು ತೆರಳುತ್ತಿದ್ದಾಗ ಸಫ್ವಾನ್ ಚಲಾಯಿಸುತ್ತಿದ್ದ ಬೈಕ್ ಗೆ ಕುಪ್ಪೆಟ್ಟಿ ಬಳಿ ಟಿಪ್ಪರ್ ಢಿಕ್ಕಿ ಹೊಡೆದಿದ್ದು, ಈ ವೇಳೆ ಸಫ್ವಾನ್ ಮೃತಪಟ್ಟಿದ್ದಾನೆ.