Home ದಕ್ಷಿಣ ಕನ್ನಡ ಬೆಳ್ತಂಗಡಿ : ಲಾಯಿಲ ಬಳಿ ಕಾರು-ರಿಕ್ಷಾ ಡಿಕ್ಕಿ, ವಿದ್ಯಾರ್ಥಿನಿ ಸೇರಿದಂತೆ ಹಲವರಿಗೆ ಗಾಯ

ಬೆಳ್ತಂಗಡಿ : ಲಾಯಿಲ ಬಳಿ ಕಾರು-ರಿಕ್ಷಾ ಡಿಕ್ಕಿ, ವಿದ್ಯಾರ್ಥಿನಿ ಸೇರಿದಂತೆ ಹಲವರಿಗೆ ಗಾಯ

Hindu neighbor gifts plot of land

Hindu neighbour gifts land to Muslim journalist

ಖಾಸಗಿ ಕಾಲೇಜೊಂದರ ಬಳಿ ರಿಕ್ಷಾ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿ ವಿದ್ಯಾರ್ಥಿನಿ ಸೇರಿದಂತೆ ಹಲವರಿಗೆ ಗಾಯಗಳಾದ ಘಟನೆ ಇಂದು ಮಧ್ಯಾಹ್ನ ಬೆಳ್ತಂಗಡಿ ತಾಲೂಕಿನ ಲಾಯಿಲದಲ್ಲಿ ನಡೆದಿದೆ.

ಬೆಳ್ತಂಗಡಿಯಿಂದ ಉಜಿರೆ ಕಡೆ ಹೋಗುತ್ತಿದ್ದ ಕಾರು, ಉಜಿರೆಯಿಂದ ಬೆಳ್ತಂಗಡಿಗೆ ಹೋಗುತ್ತಿದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ರಿಕ್ಷಾದಲ್ಲಿದ್ದ ಎಲ್ಲರಿಗೂ ಗಾಯಗಳಾಗಿದ್ದು, ರಿಕ್ಷಾ ಚಾಲಕ ಹಾಗೂ ವಿದ್ಯಾರ್ಥಿನಿಯೋರ್ವಳಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಹಾಗೆಯೇ ಕಾರು ಚಾಲಕನಿಗೂ ಸಣ್ಣಪುಟ್ಟ ಗಾಯಗಳಾಗಿದೆ.

ಗಾಯಾಳುಗಳನ್ನು ತಕ್ಷಣ ಉಜಿರೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ. ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.