Home » ಬೆಳ್ತಂಗಡಿ: ತೋಟಕ್ಕೆಂದು ಹೋದ ವ್ಯಕ್ತಿ ನಾಪತ್ತೆ

ಬೆಳ್ತಂಗಡಿ: ತೋಟಕ್ಕೆಂದು ಹೋದ ವ್ಯಕ್ತಿ ನಾಪತ್ತೆ

0 comments

Hindu neighbor gifts plot of land

Hindu neighbour gifts land to Muslim journalist

ಬೆಳ್ತಂಗಡಿ : ತೋಟಕ್ಕೆಂದು ಹೋದವರು ಮನೆಗೆ ವಾಪಾಸು ಹಿಂದಿರುಗದೆ ಕಾಣೆಯಾಗಿರುವ ಘಟನೆ ನಿನ್ನೆ ಪುದುವೆಟ್ಟು ಎಂಬಲ್ಲಿ ನಡೆದಿದೆ.

ಕಾಣೆಯಾದವರು ಪುದುವೆಟ್ಟು ಗ್ರಾಮದ ಅಡ್ಯ ನಿವಾಸಿ ಲಿಂಗಪ್ಪ ಪೂಜಾರಿ(65 ವ).

ಲಿಂಗಪ್ಪ ಪೂಜಾರಿಯವರು ತೋಟಕ್ಕೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋಗಿದ್ದು, ವಾಪಾಸು ಹಿಂದಿರುಗದೇ ಇದ್ದಾಗ ಗಾಬರಿಗೊಂಡ ಮನೆಯವರು ಹುಡುಕಾಟ ನಡೆಸಿದ್ದಾರೆ. ಆದರೆ ಎಲ್ಲಿ ಹುಡುಕಾಡಿದರೂ ಪತ್ತೆಯಾಗಿಲ್ಲ. ನಿನ್ನೆ ಸುರಿದ ಭಾರೀ ಮಳೆಯಿಂದಾಗಿ ತೋಟದ ಕಡೆ ಹೋಗುವಾಗ, ತೊಟದ ಪಕ್ಕದಲ್ಲಿರುವ ನದಿಗೆ ಕಾಲು ಜಾರಿ ಬಿದ್ದು ನೀರಲ್ಲಿ ಕೊಚ್ಚಿಹೋಗಿರಬಹುದು ಎಂದು ಶಂಕಿಸಲಾಗಿದೆ.

banner

ಸ್ಥಳಕ್ಕೆ ಧರ್ಮಸ್ಥಳ ಪೊಲೀಸ್, ಅಗ್ನಿಶಾಮಕದಳ, ಸ್ಥಳೀಯರು ಧಾವಿಸಿ ಹುಡುಕಾಟ ನಡೆಸುತ್ತಿದ್ದಾರೆ.

You may also like

Leave a Comment