Home ದಕ್ಷಿಣ ಕನ್ನಡ ಬೆಳ್ತಂಗಡಿ : ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಗ್ರಾಮಲೆಕ್ಕಿಗ ರೂಪೇಶ್ ನಿಧನ |

ಬೆಳ್ತಂಗಡಿ : ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಗ್ರಾಮಲೆಕ್ಕಿಗ ರೂಪೇಶ್ ನಿಧನ |

Hindu neighbor gifts plot of land

Hindu neighbour gifts land to Muslim journalist

ಬೆಳ್ತಂಗಡಿ : ಮೆದುಳಿನ ರಕ್ತಸ್ರಾವದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆಗೊಳಗಾಗಿದ್ದ ಬೆಳ್ತಂಗಡಿಯ ಗ್ರಾಮ ಲೆಕ್ಕಿಗ ರೂಪೇಶ್(38) ಅವರು ಇಂದು ಸಂಜೆ ಚಿಕಿತ್ಸೆ ಫಲಿಸದೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕೊಕ್ಕಡ, ಪಟ್ರಮೆ, ಶಿಶಿಲ, ಶಿಬಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಲೆಕ್ಕಿಗರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರು ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದವರು.

ರೂಪೇಶ್ ಅವರು ಮೆದುಳಿನ ರಕ್ತಸ್ರಾವದಿಂದ ಕಳೆದ ಮಾರ್ಚ್ 19 ರಿಂದ ಉಡುಪಿ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ಶನಿವಾರ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಆದರೆ ಚಿಕಿತ್ಸೆ ಫಲಿಸದೆ ಇಂದು (ಮಾರ್ಚ್ 27)ರಂದು ಸಂಜೆ ಸಾವನ್ನಪ್ಪಿದ್ದಾರೆ. ರೂಪೇಶ್ ಅವರು ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.