Home latest ಬೆಳ್ತಂಗಡಿ : ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು NIA ತನಿಖೆಗೊಳಪಡಿಸಲು ವಿ.ಹಿಂ.ಪರಿಷದ್ ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಪತ್ರ!

ಬೆಳ್ತಂಗಡಿ : ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು NIA ತನಿಖೆಗೊಳಪಡಿಸಲು ವಿ.ಹಿಂ.ಪರಿಷದ್ ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಪತ್ರ!

Hindu neighbor gifts plot of land

Hindu neighbour gifts land to Muslim journalist

ಉಡುಪಿಯಲ್ಲಿ ಪ್ರಾರಂಭವಾದ ಹಿಜಾಬ್ ಇಂದು ರಾಷ್ಟ್ರವ್ಯಾಪ್ತಿ ಪ್ರಕರಣ ಆಗಿದೆ. ಶಾಲಾ ಕಾಲೇಜುಗಳು ಪ್ರಾರಂಭವಾದರೂ ಕೂಡಾ ಹೆಚ್ಚಿನ ವಿದ್ಯಾರ್ಥಿಗಳು ತರಗತಿಗೆ ಹಾಜರಾಗುತ್ತಿಲ್ಲ. ತಾವು ಹಿಜಾಬ್ ಧರಿಸಿಯೇ ಬರುತ್ತೇವೆ ಎಂದು ಕೆಲವು ಮಕ್ಕಳ ವಾದ‌ವಾಗಿದೆ.

ಈ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ವಿ.ಹಿಂ.ಪರಿಷತ್ ಬೆಳ್ತಂಗಡಿಯ ಜಿಲ್ಲಾ ಸಹ ಕಾರ್ಯದರ್ಶಿ ನವೀನ್ ಅವರು ಮಾನ್ಯ ಮುಖ್ಯಮಂತ್ರಿಗಳಿಗೆ ಹಿಜಾಬ್ ಪ್ರಕರಣವನ್ನು NIA ತನಿಖೆಗೆ ಮಾಡಬೇಕೆಂದು ಆಗ್ರಹಿಸಿ ಪತ್ರವನ್ನು ಮಾನ್ಯ ತಹಶೀಲ್ದಾರರಿಗೆ ನೀಡಿದ್ದಾರೆ.

” ಹಿಜಾಬ್ ಒಂದು ಪ್ರಕರಣ ಮಾತ್ರವಲ್ಲ ಇದೊಂದು ಜಿಹಾದಿನ ಷಡ್ಯಂತ್ರ, ಮುಸಲ್ಮಾನ ವಿಧ್ಯಾರ್ಥಿಗಳ ಮೂಲಕ ಶಾಲಾ ಕಾಲೇಜುಗಳನ್ನು ಉಪಯೋಗಿಸಿ ಪ್ರತ್ಯೇಕತಾವಾದವನ್ನು ಬಿಂಬಿಸುವ ಪ್ರಯತ್ನ ನಡೆಸುತ್ತಿದ್ದಾರೆ.ಈ ಪ್ರಕರಣದ ಹಿಂದೆ PFI – SDPI ಮೂಲಭೂತವಾದಿ ಮುಸ್ಲಿಂ ಸಂಘಟನೆಗಳ ಕೈವಾಡವಿದ್ದು, ಅಲ್ಲದೆ ಇದರ ಹಿಂದೆ ಪಾಕಿಸ್ತಾನ, ತಾಲಿಬಾನಿನಂತಹ ಇಸ್ಲಾಂ ಮೂಲಬೂತವಾಧಿಗಳು ಬೆಂಬಲ ಕೊಡುತ್ತಿರುವುದು ಆತಂಕಕಾರಿಯಾಗಿದೆ. ಈ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಘನತೆಯನ್ನು ಕುಗ್ಗಿಸುವಂತಹ ಕೆಲಸವಾಗುತ್ತಿದೆ. ಕೋರ್ಟ್ ಕೊಟ್ಟ ತೀರ್ಪನ್ನು ಪಾಲಿಸದೆ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಕಾಲೇಜಿಗೆ ಬರುತ್ತಿರುವುದು ಇವರ ಜಿಹಾದಿ ಮಾನಸಿಕತೆಯನ್ನು ತೋರಿಸುತ್ತಿದೆ. ಈ ಹಿನ್ನಲೆಯಲ್ಲಿ ಈ ಪ್ರಕರಣದ ಹಿಂದೆ ದೇಶ ವಿಭಜನೆಯ ಸಂಚು ಇರುವ ಸಂಶಯ ವ್ಯಕ್ತವಾಗುತ್ತಿದ್ದು ಉಡುಪಿಯ ಕಾಲೇಜಿನಲ್ಲಿ ಹಿಜಾಬ್ ಪ್ರಕರಣವನ್ನು ಪ್ರಾರಂಭಿಸಿದ 6 ವಿದ್ಯಾರ್ಥಿನಿಯರನ್ನು ಮತ್ತು ಅವರಿಗೆ ಬೆಂಬಲವಾಗಿ ನಿಂತು ಈ ಸಂಚನ್ನು ರೂಪಿಸಿದವರ ವಿರುದ್ಧ NIA ( ರಾಷ್ಟ್ರೀಯ ತನಿಖಾ ದಳ ) ಮುಖಾಂತರ ತನಿಖೆಯ ನಡೆಸಲು ಕ್ರಮ ಕೈಗೊಳ್ಳಬೇಕೆಂದು” ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ವಿ.ಹಿಂ.ಪ ಜಿಲ್ಲಾ ಸಹ ಕಾರ್ಯದರ್ಶಿ ನವೀನ್ ನೆರಿಯ ಬೆಳ್ತಂಗಡಿ ಪ್ರಖಂಡ ಅಧ್ಯಕ್ಷರಾದ ದಿನೇಶ್ ಚಾರ್ಮಾಡಿ, ಉಪಾಧ್ಯಕ್ಷರಾದ ಸತೀಶ್ ನೆರಿಯ,ಬಜರಂಗದಳ ಪ್ರಖಂಡ ಸಂಯೋಜಕರಾದ ಸಂತೋಷ್ ಅತ್ತಾಜೆ ಸಹಸಂಯೋಜಕರಾದ ರಿಜೇಶ್ ಗುರುವಾಯನಕೆರೆ ಉಪಸ್ಥಿತಿತರಿದ್ದರು.