HomeInterestingUtter shocking | ಮಂಗಳೂರು ಗಾಂಜಾ ಪ್ರಕರಣದಲ್ಲಿ ಸಿಕ್ಕಿ ಬಿದ್ದ ಮೆಡಿಕಲ್ ವಿದ್ಯಾರ್ಥಿನಿಯರು !!

Utter shocking | ಮಂಗಳೂರು ಗಾಂಜಾ ಪ್ರಕರಣದಲ್ಲಿ ಸಿಕ್ಕಿ ಬಿದ್ದ ಮೆಡಿಕಲ್ ವಿದ್ಯಾರ್ಥಿನಿಯರು !!

Hindu neighbor gifts plot of land

Hindu neighbour gifts land to Muslim journalist

ಕರಾವಳಿಯ ಪ್ರತಿಷ್ಠಿತ ಕಾಲೇಜುಗಳಲ್ಲಿ ನಡೆಯುತ್ತಿದ್ದ ಗಾಂಜಾ ದಂಧೆಯನ್ನು ಬಯಲು ಮಾಡುವಲ್ಲಿ ಕಡಲ ತಡಿ ಮಂಗಳೂರಿನ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿಯರು, ವೈದ್ಯರು ಸೇರಿ ಕೆಲ ಪೆಡ್ಲರ್ ಗಳು ಗಾಂಜಾ ದಂಧೆಯಲ್ಲಿ ಭಾಗಿಯಾಗಿದ್ದು, ಹಲವರನ್ನು ವಶಕ್ಕೆ ಪಡೆದಿದ್ದಾರೆ.

ಮಂಗಳೂರಿನ ಪ್ರತಿಷ್ಠಿತ ಕೆ.ಎಂ.ಸಿ ಅತ್ತಾವರ, ಕೆ.ಎಂ.ಸಿ ಮಣಿಪಾಲ, ದೇರಳಕಟ್ಟೆಯ ಯೆನೇಪೋಯಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಮತ್ತು ವೈದ್ಯರು ಗಾಂಜಾ ದಂಧೆಯಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ ಎನ್ನಲಾಗಿದೆ. 4 ವೈದ್ಯಕೀಯ ವಿದ್ಯಾರ್ಥಿನಿಯರು, 2 ವೈದ್ಯರು, 2 ವಿದ್ಯಾರ್ಥಿಗಳು ಸೇರಿ ಒಟ್ಟು 10 ಜನರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಗಾಂಜಾ ಸೇವನೆ ಹಾಗೂ ಗಾಂಜಾ ಪೆಡ್ಲಿಂಗ್ ಪ್ರಕರಣದಲ್ಲಿ ಗಾಂಜಾ ಪೆಡ್ಲರ್‌ಗಳು, ವೈದ್ಯಕೀಯ ವಿದ್ಯಾರ್ಥಿನಿಯರ ಜೊತೆಗೆ ವೈದ್ಯರನ್ನು ಕೂಡ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಡ್ರಗ್ ಪೆಡ್ಲಿಂಗ್ ಕೇಸ್ ನಲ್ಲಿ ರಾಮ್ ಜೀ ವಶಕ್ಕೆ ಪಡೆದಿದ್ದು ಈ ಸಂದರ್ಭ ಅನೇಕ ಸ್ಪೋಟಕ ಮಾಹಿತಿ ಬೆಳಕಿಗೆ ಬಂದಿದೆ ಎನ್ನಲಾಗಿದ್ದು, ಈತನ ಮಾಹಿತಿ ಅನುಸಾರ ಮೆಡಿಕಲ್ ವಿದ್ಯಾರ್ಥಿನಿಯರು, ವೈದ್ಯರನ್ನು ವಶಕ್ಕೆ ಪಡೆಯಲಾಗಿದೆ. ಯು.ಕೆ ಮೂಲದ ಗಾಂಜಾ ಪೆಡ್ಲರ್ ನೀಲ್ ಕಿಶೋರಿಲಾಲ್ ರಾಮ್ ಜೀ(38) ಎಂಬ ವ್ಯಕ್ತಿ ನಗರದ ಬಂಟ್ಸ್ ಹಾಸ್ಟೆಲ್ ರಸ್ತೆಯಲ್ಲಿ ರೂಂ ಬಾಡಿಗೆ ಪಡೆದು ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಗಾಂಜಾ ದಂಧೆಯಲ್ಲಿ ಬಂಧಿತನಾಗಿರುವ ಪ್ರಮುಖ ಪೆಡ್ಲರ್ ನೀಲ್ ಕಿಶೋರಿಲಾಲ್ ರಾಮ್ ಜೀ(38) ಯು.ಕೆ ಮೂಲದ ಪ್ರಜೆಯಾಗಿದ್ದು, ಈತನಿಗೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾರಿಪಳ್ಳದ ಮಹಮ್ಮದ್ ರವೂಪ್ ಅಲಿಯಾಸ್ ಗೌಸ್(34) ಸಂಪೂರ್ಣ ಬೆಂಬಲ ನೀಡಿದ್ದಾರೆ ಎನ್ನಲಾಗಿದೆ. ಈ ಇಬ್ಬರು ಸೇರಿಕೊಂಡು ಮಂಗಳೂರಿನ ಪ್ರತಿಷ್ಠಿತ ವೈದ್ಯಕೀಯ ಕಾಲೇಜುಗಳನ್ನು ಕೇಂದ್ರೀಕರಿಸಿ ವಿದ್ಯಾರ್ಥಿಗಳು ಮತ್ತು ವೈದ್ಯರನ್ನೇ ಟಾರ್ಗೆಟ್ ಮಾಡಿಕೊಂಡಿದ್ದು, ಅದರಲ್ಲೂ ನಾಲ್ವರು ವಿದ್ಯಾರ್ಥಿನಿಯರು ಅಂದರ್ ಆಗಿರುವ ಹಿನ್ನೆಲೆ ಮತ್ತಷ್ಟು ರೋಚಕ ಸತ್ಯಗಳು ಹೊರ ಬೀಳುವ ಸಾಧ್ಯತೆ ದಟ್ಟವಾಗಿದೆ.

ಮಹಾರಾಷ್ಟ್ರದ ಪುಣೆಯ ಡಾ.ಹೀರಾ ಬಸಿನ್ ಕೆ.ಎಂ.ಸಿ ಮೆಡಿಕಲ್ ಕಾಲೇಜಿನ ನಾಲ್ಕನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ. ಕೇರಳ ಮೂಲದ ಡಾ. ನದಿಯಾ ಸಿರಾಜ್(24) ಕೆ.ಎಂ.ಸಿ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಇಂಟರ್ನಿಯಾಗಿದ್ದಾಳೆ. ಆಂಧ್ರಪ್ರದೇಶದ ಡಾ.ವರ್ಷಿಣಿ ಪ್ರತಿ(26) ಕೆ.ಎಂ.ಸಿ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಇಂಟರ್ನಿಯಾಗಿದ್ದು, ಪಂಜಾಬ್ ಮೂಲದ ಡಾ.ರಿಯಾ ಚಡ್ಡ(22) ಕೆ.ಎಂ.ಸಿ ಡೆಂಟಲ್ ಕಾಲೇಜಿನಲ್ಲಿ ನಾಲ್ಕನೇ ವರ್ಷದ ಬಿಡಿಎಸ್ ಶಿಕ್ಷಣ ಪಡೆಯುತ್ತಿದ್ದಳು ಎನ್ನಲಾಗಿದೆ.

ಕೇರಳದ ಮೂಲದ ವೈದ್ಯ ಡಾ.ಸಮೀರ್(32) ಕೆ.ಎಂ‌.ಸಿ ಆಸ್ಪತ್ರೆಯ ಮೆಡಿಕಲ್ ಆಫೀಸರ್ ಆಗಿದ್ದು, ತಮಿಳುನಾಡಿನ ಮಣಿ‌ಮಾರನ್ ಮುತ್ತು(28) ಕೆ.ಎಂ.ಸಿ ಆಸ್ಪತ್ರೆಯ ವೈದ್ಯನಾಗಿದ್ದರು. ಇವರ ಜೊತೆಗೆ ವಿದ್ಯಾರ್ಥಿಗಳಾದ ಪಂಜಾಬ್ ನ ಡಾ. ಭಾನು ದಹಿಯಾ(27) ದೇರಳಕಟ್ಟೆಯ ಯೆನೇಪೋಯಾ ಕಾಲೇಜಿನ ವೈದ್ಯ ವಿದ್ಯಾರ್ಥಿಯಾಗಿದ್ದು ದೆಹಲಿ ಮೂಲದ ಡಾ.ಕ್ಷಿತಿಜ್ ಗುಪ್ತ(23) ಕೆ.ಎಂ.ಸಿಯ ವೈದ್ಯ ವಿದ್ಯಾರ್ಥಿಯಾಗಿದ್ದ ಎಂದು ತಿಳಿದುಬಂದಿದೆ.

ವಿದ್ಯಾರ್ಥಿನಿಯರಾದ ಡಾ. ನದಿಯಾ ಸಿರಾಜ್(24), ಡಾ.ವರ್ಷಿಣಿ ಪ್ರತಿ(26), ಡಾ.ರಿಯಾ ಚಡ್ಡ(22), ಡಾ.ಹೀರಾ ಬಸಿನ್(23) ಹಾಗೂ ವೈದ್ಯ ಡಾ.ಸಮೀರ್(32), ಮಣಿ‌ಮಾರನ್ ಮುತ್ತು(28), ಸ್ಥಳೀಯ ಮಹಮ್ಮದ್ ರವೂಪ್ ಅಲಿಯಾಸ್ ಗೌಸ್(34) ಇವರನ್ನು ಬಂಧಿಸಲಾಗಿದೆ. ವಿದ್ಯಾರ್ಥಿಗಳಾದ ಡಾ. ಭಾನು ದಹಿಯಾ(27), ಡಾ.ಕ್ಷಿತಿಜ್ ಗುಪ್ತ(23) ಬಂಧಿಸಲಾಗಿದೆ. ಎರಡು ಕೆ.ಜಿ‌ ಗಾಂಜಾ, ಒಂದು ನಕಲಿ ಪಿಸ್ತೂಲ್, ಡ್ರಾಗರ್ ವಶಕ್ಕೆ ಪಡೆಯಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

RELATED ARTICLES

Most Popular

Recent Comments