Home ದಕ್ಷಿಣ ಕನ್ನಡ Sullia: ಸ್ಕೂಟಿ – ಬಸ್‌ ಅಪಘಾತ; ವಿದ್ಯಾರ್ಥಿನಿ ಸಾವು

Sullia: ಸ್ಕೂಟಿ – ಬಸ್‌ ಅಪಘಾತ; ವಿದ್ಯಾರ್ಥಿನಿ ಸಾವು

Hindu neighbor gifts plot of land

Hindu neighbour gifts land to Muslim journalist

Sullia: ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಸ್ಕೂಟಿ ನಡುವೆ ಅಪಘಾತವುಂಟಾಗಿದ್ದು, ಸ್ಕೂಟಿ ಸವಾರೆ ಕಾಲೇಜು ವಿದ್ಯಾರ್ಥಿನಿ ಮೃತಪಟ್ಟಿದ್ದು, ಅವರ ಸಹೋದರಿ ಗಂಭೀರ ಗಾಯಗೊಂಡ ಘಟನೆಯೊಂದು ಸುಳ್ಯದ ಪರಿವಾರಕಾನ-ಉಬರಡ್ಕ ರಸ್ತೆಯ ಸೂಂತೋಡು ಎನ್ನುವಲ್ಲಿ ಶುಕ್ರವಾರ ಸಂಜೆ ನಡೆದಿದೆ.

ಪುತ್ತೂರು ಖಾಸಗಿ ಕಾಲೇಜಿನ ದ್ವಿತೀಯ ಪದವಿ ವಿದ್ಯಾರ್ಥಿನಿ, ಉಬರಡ್ಕ ಮಿತ್ತೂರು ಗ್ರಾಮದ ನಾರಾಯಣ ಕಾಡುತೋಟ ಅವರ ಪುತ್ರಿ ರಚನಾ (20) ಮೃತ ಯುವತಿ. ಇವರ ಸಹೋದರಿ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಹತ್ತನೇ ತರಗತಿ ವಿದ್ಯಾರ್ಥಿನಿ ಅನನ್ಯಾ (16) ಗಂಭೀರ ಗಾಯಗೊಂಡಿದ್ದಾರೆ.

 

ರಚನಾ ಅವರು ತಮ್ಮ ಸಹೋದರಿ ಅನನ್ಯಾರ ಜೊತೆ ಸ್ಕೂಟಿ ಮೂಲಕ ಸುಳ್ಯದಿಂದ ತಮ್ಮ ಮನೆಗೆ ತೆರಳುತ್ತಿದ್ದಾಗ ಈ ಭೀಕರ ಅಪಘಾತ ನಡೆದಿದೆ. ಸುಳ್ಯ ಕಡೆಗೆ ಬರುತ್ತಿದ್ದ ಬಸ್‌ ಸೂಂತೋಡು ಎನ್ನುವಲ್ಲಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಗಂಭೀರ ಗಾಯಗೊಂಡಿದ್ದ ರಚನಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಅನನ್ಯಾ ಅವರ ಕಾಲಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.