Home ದಕ್ಷಿಣ ಕನ್ನಡ Kadaba: ಜ್ವರದಿಂದ ಬಳಲುತ್ತಿದ್ದ ಯುವಕ ಮೃತ್ಯು!

Kadaba: ಜ್ವರದಿಂದ ಬಳಲುತ್ತಿದ್ದ ಯುವಕ ಮೃತ್ಯು!

Hindu neighbor gifts plot of land

Hindu neighbour gifts land to Muslim journalist

ಕಡಬ : ಡೆಂಗ್ಯೂ ಮತ್ತು ಮಲೇರಿಯಾ ಜ್ವರ ವಿಪರೀತವಾದ ಹಿನ್ನೆಲೆಯಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಕುಟ್ರುಪಾಡಿ ಗ್ರಾಮದ ವಿಮಲಗಿರಿ ಎಂಬಲ್ಲಿ ನಡೆದಿದೆ.

ವಿಮಲಗಿರಿ ಕಲ್ಲೋಲಿಕ್ಕಲ್ ನಿವಾಸಿ ಶಿಜು ಕಲ್ಲೋಳಿಕಲ್ (31) ಎಂಬವರು ಮೃತಪಟ್ಟವರು.ಭಾನುವಾರ ಜ್ವರ ಜಾಸ್ತಿಯಾದ ಹಿನ್ನೆಲೆಯಲ್ಲಿ ಕಡಬದ ಖಾಸಗಿ ಮೆಡಿಕಲ್ ಸೆಂಟರ್‌ಗೆ ಅವರು ಚಿಕಿತ್ಸೆಗಾಗಿ ಆಗಮಿಸಿದ್ದರು.ಅಲ್ಲಿ ಪರೀಕ್ಷೆ ನಡೆಸಿದಾಗ ಡೆಂಗ್ಯೂ ಜ್ವರ ಪತ್ತೆಯಾಗಿದೆ. ನಂತರದಲ್ಲಿ ಮನೆಗೆ ಬಂದ ಶಿಜು ಅವರಿಗೆ ಜ್ವರ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಮತ್ತೆ ಮಾರನೇ ದಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷೆ ನಡೆಸಿದ ವೈದರು ಹೆಚ್ಚುವರಿ ಚಿಕಿತ್ಸೆಗಾಗಿ ಮಂಗಳೂರಿಗೆ ಕಳುಹಿಸಿಕೊಡಲಾಯಿತು.ಆದರೆ ಮಂಗಳೂರಿನ ಆಸ್ಪತ್ರೆಗೆ ತಲುಪಿದ ವೇಳೆಗಾಗಲೇ ಶಿಜು ಅವರು ಮೃತಪಟ್ಟಿದ್ದರು.

ಶಿಜು ಅವರು ಮಲಂಕರ ಕ್ಯಾಥೋಲಿಕ್ ಚರ್ಚ್ ಪುತ್ತೂರು ಧರ್ಮಪ್ರಾಂತ್ಯದ ರೆ.ಫಾ. ಥಾಮಸ್ ಕಲ್ಲೋಳಿಕಲ್ ಅವರ ಸಹೋದರಾಗಿದ್ದಾರೆ. ಶಿಜು ಅವರು ಅಜ್ಜಿ, ತಾಯಿ ಸಾಲಿ,ಪತ್ನಿ ಧನ್ಯ, ಸಹೋದರಿ ಸ್ವಪ್ನ ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.ಮೃತ ಶಿಜು ಅವರ ಅಂತ್ಯ ಸಂಸ್ಕಾರ ಕಾರ್ಯಗಳು ವಿಮಲಗಿರಿ ಸಂತ ಮೇರಿಸ್ ಮಲಂಕರ ಕ್ಯಾಥೊಲಿಕ್ ಚರ್ಚಿನಲ್ಲಿ ನೆರವೇರಿತು.ವಿವಿಧ ಚರ್ಚುಗಳ ಧರ್ಮಗುರುಗಳು,ಧರ್ಮಭಗಿನಿಯರು,ಧಾರ್ಮಿಕ, ರಾಜಕೀಯ,ಸಾಮಾಜಿಕ ಮುಖಂಡರು,ವಿವಿಧ ಸಂಘಟನೆಗಳ ಪ್ರಮುಖರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು.