Home ದಕ್ಷಿಣ ಕನ್ನಡ ಬೆಳ್ತಂಗಡಿ: ಕುಡಿದ ಮತ್ತಿನಲ್ಲಿ ಮಗನಿಂದ ತಂದೆ ಮೇಲೆ ಹಲ್ಲೆ, ದೂರು ದಾಖಲು

ಬೆಳ್ತಂಗಡಿ: ಕುಡಿದ ಮತ್ತಿನಲ್ಲಿ ಮಗನಿಂದ ತಂದೆ ಮೇಲೆ ಹಲ್ಲೆ, ದೂರು ದಾಖಲು

Hindu neighbor gifts plot of land

Hindu neighbour gifts land to Muslim journalist

ಕುಡಿದ ಮತ್ತಿನಲ್ಲಿದ್ದ ಮಗನೋರ್ವ ತನ್ನ ತಂದೆಗೆ ಜೀವಬೆದರಿಕೆಯೊಡ್ಡಿ ಹಲ್ಲೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದಲ್ಲಿ ನಡೆದಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುದುವೆಟ್ಟು ಗ್ರಾಮದ ರಜೀಶ್ ಆರೋಪಿ. ತಂದೆ ಸುಕುಮಾರ್, ತನ್ನ ಮಗ ರಜೀಶ್ ವಿಪರೀತ ಕುಡಿದ ಮತ್ತಿನಲ್ಲಿ ಸಂಜೆ ವೇಳೆ ಮನೆಗೆ ಬಂದು ನನ್ನಲ್ಲಿ, ನೀನು ಮನೆ ಬಿಟ್ಟು ಹೋಗಬೇಕು ಇಲ್ಲದಿದ್ದರೆ ನಿನ್ನನ್ನು ಕೊಲ್ಲದೆ ಬಿಡುವುದಿಲ್ಲ ಎಂದು ಜೀವಬೆದರಿಕೆಯೊಡ್ಡಿ ಅವಾಚ್ಯ ಶಬ್ದಗಳಿಂದ ಬೈದು ಅಂಗಳದ ಬದಿಯಲ್ಲಿದ್ದ ದೊಣ್ಣೆಯಿಂದ ಕಾಲಿನ ತೊಡೆಗೆ ಹೊಡೆದಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಗಾಯಗೊಂಡ ತಂದೆ ಸುಕುಮಾರ್ ರವರನ್ನು ನೆರೆ ಮನೆಯ ಕಮಲದಾಸ್ ಹಾಗೂ ಸುಕುಮಾರ ಅವರ ಪತ್ನಿ ಅಲ್ಪಮ್ಮ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.