Homeದಕ್ಷಿಣ ಕನ್ನಡಕಡಿಮೆ ಅಂಕ ಪಡೆದದಕ್ಕೆ ಬಾಲಕಿಗೆ ಬೈದ ಪೋಷಕರು | ಬೆಂಗಳೂರಿನಿಂದ ನಾಪತ್ತೆಯಾದ ಬಾಲಕಿ ಮಂಗಳೂರಿಗೆ ಬಂದಿರುವ...

ಕಡಿಮೆ ಅಂಕ ಪಡೆದದಕ್ಕೆ ಬಾಲಕಿಗೆ ಬೈದ ಪೋಷಕರು | ಬೆಂಗಳೂರಿನಿಂದ ನಾಪತ್ತೆಯಾದ ಬಾಲಕಿ ಮಂಗಳೂರಿಗೆ ಬಂದಿರುವ ಮಾಹಿತಿ | ಹಲವೆಡೆ ಶೋಧ ಕಾರ್ಯ

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು : ಕಡಿಮೆ ಅಂಕ ತೆಗೆದಿದ್ದಕ್ಕೆ ಪೋಷಕರು ಬೈದರೆಂದು 9ನೇ ತರಗತಿ ಓದುತ್ತಿದ್ದ ಬಾಲಕಿಯೊಬ್ಬಳು ಮನೆಬಿಟ್ಟು ನಾಪತ್ತೆಯಾಗಿರುವ ಘಟನೆ ಬೆಂಗಳೂರಿನ ನಂದಿನಿ ಲೇಔಟ್ ನಿಂದ ವರದಿಯಾಗಿದೆ.

ಆದಿತ್ಯವಾರ ಸಂಜೆ ಮನೆಯಿಂದ ಟ್ಯೂಷನ್ ಗೆ ತೆರಳಿದ್ದ 14 ವರ್ಷ ಪ್ರಾಯದ ಭಾರ್ಗವಿ ನಂತರ ಟ್ಯೂಷನ್ ಮುಗಿಸಿ ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ತೆರಳಿದ್ದಾಳೆ. ಮೆಜೆಸ್ಟಿಕ್ ನಿಂದ ಮಂಗಳೂರು ಬಸ್ ಹತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಘಟನೆ ಸಂಬಂಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬೆಂಗಳೂರಿನಿಂದ ಮಂಗಳೂರುಗೆ ಬಸ್‌ನಲ್ಲಿ ಬಂದಿರುವ ಮಾಹಿತಿ ಮೇರೆಗೆ ಬಾಲಕಿ ಮಂಗಳೂರಿನ ಹಲವೆಡೆ ತಿರುಗಾಡಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ.

ಸೋಮವಾರ ಬೆಳಗ್ಗಿನ ಜಾವ 3 ಗಂಟೆಗೆ ಮಂಗಳೂರು ಕೆ.ಎಸ್ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಬಂದಿಳಿದ ಬಾಲಕಿ, ಅಲ್ಲಿಂದ ರಿಕ್ಷಾವೊಂದರಲ್ಲಿ ಮುಕ್ಕ ಬೀಚ್ ಗೆ ತೆರಳಿ ಅಲ್ಲಿಂದ ಅದೇ ರಿಕ್ಷಾದಲ್ಲಿ ಕದ್ರಿ ಪಾರ್ಕ್ ಗೆ ಹೋಗಿರುವುದು ಪೊಲೀಸರ ತನಿಖೆಯಲ್ಲಿ ಗೊತ್ತಾಗಿದೆ.

ಬಾಲಕಿಯನ್ನು ಕರೆದುಕೊಂಡು ಹೋದ ರಿಕ್ಷಾ ಚಾಲಕನನ್ನು ಪೊಲೀಸರು ವಿಚಾರಣೆ ನಡೆಸಿ ಬಾಲಕಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

Praveen Chennavara
Praveen Chennavara Palthady village & post Kadaba Taluq D.K.-For contact- 7090806456
RELATED ARTICLES

Most Popular

Recent Comments