Home ದಕ್ಷಿಣ ಕನ್ನಡ ಕಡಬ:ಬೈಕ್ ಹಾಗೂ ಕಾರು ಮಧ್ಯೆ ಅಪಘಾತ!! ಬೈಕ್ ಸವಾರನಿಗೆ ಗಾಯ-ಆಸ್ಪತ್ರೆಗೆ ದಾಖಲು

ಕಡಬ:ಬೈಕ್ ಹಾಗೂ ಕಾರು ಮಧ್ಯೆ ಅಪಘಾತ!! ಬೈಕ್ ಸವಾರನಿಗೆ ಗಾಯ-ಆಸ್ಪತ್ರೆಗೆ ದಾಖಲು

Hindu neighbor gifts plot of land

Hindu neighbour gifts land to Muslim journalist

ಕಡಬ: ಬೈಕ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆಯೊಂದು ಜುಲೈ 04ರ ಮಧ್ಯಾಹ್ನ ಕಡಬದಲ್ಲಿ ನಡೆದಿದೆ.

ಉಪ್ಪಿನಂಗಡಿಯಿಂದ ಕಡಬಕ್ಕೆ ಬರುತ್ತಿದ್ದ ಕಾರಿಗೆ ವಿರುದ್ಧ ದಿಕ್ಕಿನಲ್ಲಿ ಬಂದ ಬೈಕ್ ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ ಎನ್ನಲಾಗಿದ್ದು, ಅಪಘಾತದ ರಭಸಕ್ಕೆ ಬೈಕ್ ಸವಾರ ಗಾಯಗೊಂಡಿದ್ದು ಕೂಡಲೇ ಸ್ಥಳೀಯರು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

ಗಾಯಾಳು ಬೈಕ್ ಸವಾರನನ್ನು ಕಡಬ ಸಮೀಪದ ದೇರಾಜೆ ನಿವಾಸಿ ಎಂದು ಗುರುತಿಸಲಾಗಿದ್ದು, ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.