Home ದಕ್ಷಿಣ ಕನ್ನಡ ಕಡಬ : ಮತ್ತೆ ದಾಳಿ ಮಾಡಿದ ಕಾಡಾನೆ ,ಕೃಷಿಕರೊಬ್ಬರನ್ನು ಬೆನ್ನಟ್ಟಿದ ಕಾಡಾನೆ

ಕಡಬ : ಮತ್ತೆ ದಾಳಿ ಮಾಡಿದ ಕಾಡಾನೆ ,ಕೃಷಿಕರೊಬ್ಬರನ್ನು ಬೆನ್ನಟ್ಟಿದ ಕಾಡಾನೆ

Hindu neighbor gifts plot of land

Hindu neighbour gifts land to Muslim journalist

Kadaba Wild elephant: ಕಡಬ: ಸೋಮವಾರ ಬೆಳಿಗ್ಗೆ ಕಡಬ ತಾಲೂಕಿನ ಮರ್ಧಾಳ ಸಮೀಪದ ನೈಲ ಎಂಬಲ್ಲಿ ಕಾಡಾನೆಯು ಎರಡು ಜೀವಗಳನ್ನು ಬಲಿ ಪಡೆದ ಬೆನ್ನಲ್ಲೇ ಮಂಗಳವಾರ ಮತ್ತೊಂದೆಡೆ ದಾಳಿ ಮಾಡಿದೆ.

ಮಂಗಳವಾರ ಬೆಳಗಿನ ಜಾವ ಕಡಬ ತಾಲೂಕಿನ ಕೊಂಬಾರು ಗ್ರಾಮದ ಪೆರುಂದೋಡಿ ಎಂಬಲ್ಲಿ ಕೃಷಿಕರೋರ್ವರನ್ನು ಕಾಡಾನೆಯೊಂದು (Kadaba Wild elephant) ಬೆನ್ನಟ್ಟಿದ ಘಟನೆ ಬೆಳಕಿಗೆ ಬಂದಿದೆ.

 

ಕೊಂಬಾರು ಪರಿಸರದಲ್ಲಿ ಕಾಡಾನೆಯು ಕೃಷಿ ತೋಟಗಳಿಗೆ ಲಗ್ಗೆ ಇಟ್ಟಿದ್ದು, ಅಪಾರ ಕೃಷಿಯನ್ನು ಹಾನಿ ಮಾಡಿದೆ. ಪೆರುಂದೋಡಿ ನಿವಾಸಿ ಮೋಹನ್ ಎಂಬವರು ಮಂಗಳವಾರ ಬೆಳಿಗ್ಗೆ 3.30ರ ಸುಮಾರಿಗೆ ನೀರು ಹಾಯಿಸಲೆಂದು ತನ್ನ ತೋಟಕ್ಕೆ ತೆರಳಿದ್ದ ವೇಳೆ ಕಾಡಾನೆಯೊಂದು ಬೆನ್ನಟ್ಟಿದ್ದು, ಅದೃಷ್ಟವಶಾತ್ ಓಡಿ ತಪ್ಪಿಸಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸಮೀಪದ ಮಣಿಬಾಂಡ ಕಟ್ಟೆ ನಿವಾಸಿ ದೇವರಾಜ್ ಎಂಬವರ ಕೃಷಿ ತೋಟಕ್ಕೆ ಭಾಗಷಃ ಹಾನಿಯಾಗಿದ್ದು, ಕಟ್ಟೆ, ಪೆರುಂದೋಡಿ ಪರಿಸರದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.