Home ದಕ್ಷಿಣ ಕನ್ನಡ ಕಲ್ಲಡ್ಕ: ಬಾವಿಗೆ ಬಿದ್ದು ನವ ವಿವಾಹಿತೆ ಮೃತ್ಯು

ಕಲ್ಲಡ್ಕ: ಬಾವಿಗೆ ಬಿದ್ದು ನವ ವಿವಾಹಿತೆ ಮೃತ್ಯು

Hindu neighbor gifts plot of land

Hindu neighbour gifts land to Muslim journalist

ಬಂಟ್ವಾಳ : ನವ ವಿವಾಹಿತೆಯೋರ್ವಳು ನೀರು ಸೇದುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಮೃತಪಟ್ಟ ಘಟನೆಯೊಂದು ಕಲ್ಲಡ್ಕದಲ್ಲಿ ಇಂದು ಬೆಳಗ್ಗೆ ನಡೆದಿದೆ.

ಬಿ.ಸಿ.ರೋಡ್ ತಲಪಾಡಿ ನಿವಾಸಿ, ಪ್ರಸಕ್ತ ಫರಂಗಿಪೇಟೆ ಸಮೀಪದ ಅಮ್ಮೆಮ್ಮಾರ್ ನಲ್ಲಿ ವಾಸವಿರುವ ಮುಹಮ್ಮದ್ ಎಂಬವರ ಪುತ್ರಿ ಮುನೀಝಾ (20) ಎಂಬಾಕೆಯೇ ಮೃತ ಯುವತಿ ಎಂದು ತಿಳಿದುಬಂದಿದೆ.

ಎರಡು ತಿಂಗಳ ಹಿಂದೆ ಮುನೀಝಾ ಅವರನ್ನು ಕಲ್ಲಡ್ಕ ನಿವಾಸಿ ಇಬ್ರಾಹಿಂ ತೌಸೀರ್ ಎಂಬವರಿಗೆ ವಿವಾಹ ಮಾಡಿಕೊಡಲಾಗಿದ್ದು, ಎಂದಿನಂತೆ ಇಂದು ಬೆಳಗ್ಗೆ ನೀರಿಗಾಗಿ ಅವರು ಕೊಡದೊಂದಿಗೆ ಬಾವಿ ಕಡೆಗೆ ತೆರಳಿದ್ದರು ಎನ್ನಲಾಗಿದೆ.

ಸುಮಾರು ಹೊತ್ತು ಕಳೆದರೂ ಮುನೀಝಾ ಬಾರದಿರುವುದನ್ನು ಗಮಿಸಿದ ಮನೆಯವರು ಬಾವಿ ಕಡೆ ತೆರಳಿ ನೋಡಿದಾಗ ಕೊಡ ಬಾವಿ ನೀರಿನಲ್ಲಿ ತೇಲುತ್ತಿರುವುದು ಕಂಡು ಬಂದಿದೆ. ಬಳಿಕ ಮುನೀಝಾ ನೀರಿನಲ್ಲಿ ಮುಳುಗಿರುವುದು ಪತ್ತೆಯಾಗಿದೆ.

ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.