Home ದಕ್ಷಿಣ ಕನ್ನಡ ಕಾರ್ಕಳ : ರಸ್ತೆ ಬದಿ ನಿಂತಿದ್ದ ಕಾರಿಗೆ ಬಸ್ಸು ಡಿಕ್ಕಿ : ಓರ್ವ ಮೃತ್ಯು, ಮತ್ತೋರ್ವನಿಗೆ...

ಕಾರ್ಕಳ : ರಸ್ತೆ ಬದಿ ನಿಂತಿದ್ದ ಕಾರಿಗೆ ಬಸ್ಸು ಡಿಕ್ಕಿ : ಓರ್ವ ಮೃತ್ಯು, ಮತ್ತೋರ್ವನಿಗೆ ಗಂಭೀರ ಗಾಯ!

Hindu neighbor gifts plot of land

Hindu neighbour gifts land to Muslim journalist

ಕಾರ್ಕಳ : ರಸ್ತೆ ಬದಿ ನಿಂತಿದ್ದ ಕಾರಿಗೆ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಮತ್ತೋರ್ವ ಗಾಯಗೊಂಡ ಘಟನೆ ಕರಿಯ ಕಲ್ಲು ರುದ್ರಭೂಮಿಯ ಹತ್ತಿರ ರವಿವಾರ ನಡೆದಿದೆ.

ಗದಗ ಮೂಲದ ಕಾರ್ಕಳ ಜೋಡುರಸ್ತೆಯ ಬಾಡಿಗೆ ಮನೆ ನಿವಾಸಿ ಗಿರೀಶ್ ಛಲವಾದಿ (38)ಮೃತ ವ್ಯಕ್ತಿ. ಕೃಷ್ಣ(22) ಎಂಬುವವರು ಗಾಯಗೊಂಡಿದ್ದು ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗಿರೀಶ್ ಬಾವಿ ಕೆಲಸಕ್ಕಾಗಿ ತನ್ನ ಕಾರಿನಲ್ಲಿ ಕೆಲಸದವರನ್ನು ಕರೆದುಕೊಂಡು ಜೋಡುರಸ್ತೆಯಿಂದ ಬಜಗೋಳಿಗೆ ಹೊರಟಿದ್ದು, ದಾರಿ ಮಧ್ಯೆ ಕಾರಿನ ಸೈಲೆನ್ಸರ್‌ನಲ್ಲಿ ಜಾಸ್ತಿ ಹೊಗೆ ಬರುತ್ತಿದ್ದುದನ್ನು ನೋಡಿ ಗಾಡಿ ನಿಲ್ಲಿಸಿದರು. ಗಿರೀಶ್ ಕಾರಿನ ಬಳಿ ನಿಂತುಕೊಂಡಿದ್ದರೆ, ಕೃಷ್ಣ ಕಾರಿನ ಮುಂಭಾಗದಲ್ಲಿ ನಿಂತುಕೊಂಡಿದ್ದರು. ಈ ವೇಳೆ ಪುರಿ ಕಡೆಯಿಂದ ಬಂದ ಬಸ್ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ.

ಇವರಿಬ್ಬರು ಅಪಘಾತದಿಂದ ತೀವ್ರವಾಗಿ ಗಾಯಗೊಂಡಿದ್ದು, ಇದರಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗಿರೀಶ್ ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.