Homeದಕ್ಷಿಣ ಕನ್ನಡರಾಜ್ಯದಲ್ಲಿ ಐದು ದಿನ ಭಾರೀ ಮಳೆ : 14 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ!

ರಾಜ್ಯದಲ್ಲಿ ಐದು ದಿನ ಭಾರೀ ಮಳೆ : 14 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ!

Hindu neighbor gifts plot of land

Hindu neighbour gifts land to Muslim journalist

ರಾಜ್ಯದಲ್ಲಿ ಮಳೆ ಮತ್ತೆ ಜೋರಾಗಿದೆ. ರಾಜ್ಯ ರಾಜಧಾನಿಯಲ್ಲಿ ನಿನ್ನೆ ಸುರಿದ ಭಾರೀ ಮಳೆಗೆ ಜನ ತತ್ತರಿಸಿ ಹೋಗಿದ್ದಾರೆ. ಈಗ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ ಐದು ದಿನ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆ.28ರಂದು ಉತ್ತರ ಒಳನಾಡಿನ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ರಾಮನಗರ ಮತ್ತು ತುಮಕೂರು ಜಿಲ್ಲೆಗೆ ಯಲ್ಲೊ ಅಲರ್ಟ್ ಘೋಷಿಸಲಾಗಿದೆ.

ಆ.29 ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಾಮರಾಜನಗರ, ಚಿಕ್ಕಮಗಳೂರು, ಕೋಲಾರ ಜಿಲ್ಲೆಗೆ ಯಲ್ಲೊ ಅಲರ್ಟ್ ನೀಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಯಾವುದೇ ಮುನ್ನೆಚ್ಚರಿಕೆ ಇರುವುದಿಲ್ಲ. ರಾಮನಗರ ಜಿಲ್ಲೆಯಲ್ಲಿ ಸುರಿದ ಕುಂಭದ್ರೋಣ ಮಳೆಗೆ ಅಕ್ಷರಶಃ ಮುಳುಗಿ ಹೋಗಿದೆ. ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿಯೇ ಅತೀ ಹೆಚ್ಚು ಹಾನಿಯಾಗಿದ್ದು, ಇದೆ ಮೊದಲ ಬಾರಿಗೆ ಸಾಂತ್ವನ ಕೇಂದ್ರ ತೆರೆಯಲಾಗಿದೆ.

RELATED ARTICLES

Most Popular

Recent Comments