Home Breaking Entertainment News Kannada ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ದೇವಸ್ಥಾನಕ್ಕೆ ಭೇಟಿ ನೀಡಿದ ರಾಕಿಂಗ್ ಸ್ಟಾರ್ ಯಶ್

ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ದೇವಸ್ಥಾನಕ್ಕೆ ಭೇಟಿ ನೀಡಿದ ರಾಕಿಂಗ್ ಸ್ಟಾರ್ ಯಶ್

Hindu neighbor gifts plot of land

Hindu neighbour gifts land to Muslim journalist

ಇನ್ನೇನು ಕೆಲವೇ ದಿನಗಳಲ್ಲಿ ಬಹಳ ನೀರೀಕ್ಷೆಯ ಕೆಜಿಎಫ್-2 ಚಿತ್ರ ಬಿಡುಗಡೆಗೊಳ್ಳುತ್ತಿದ್ದು, ಈ ಪ್ರಯುಕ್ತ ರಾಕಿಂಗ್ ಸ್ಟಾರ್ ಯಶ್ ದೇವಾಲಯ ಭೇಟಿ ಆರಂಭಿಸಿದ್ದಾರೆ. ಇಂದು ನಟ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳಕ್ಕೆ ಆಗಮಿಸಿ ದೇವರ ದರ್ಶನ ಪಡೆದಿದ್ದಾರೆ.

ಕೆ.ಜಿ.ಎಫ್ ನಿರ್ಮಾಪಕ ವಿಜಯ್ ಕಿರಂಗದೂರು ಜೊತೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹಾಗೂ ಬೆಳ್ತಂಗಡಿ ತಾಲೂಕಿನಲ್ಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಧರ್ಮಸ್ಥಳಕ್ಕೆ ಹೆಲಿಕಾಫ್ಟರ್ ನಲ್ಲಿ ಆಗಮಿಸಿ ಅಲ್ಲಿಂದ ರಸ್ತೆ ಮಾರ್ಗವಾಗಿ ಕುಕ್ಕೆಗೆ ತೆರಳಿದ್ದಾರೆ.

ಕುಕ್ಕೆಯಲ್ಲಿ ದೇವರ ದರ್ಶನ ಪಡೆದು ನಂತರ ಧರ್ಮಸ್ಥಳಕ್ಕೆ ಬಂದು ಮೊದಲು ಧರ್ಮಾಧಿಕಾರಿ ವೀರೇಂದ್ರ ಹೆಗ್ಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಈ ವೇಳೆ ಪೂಜ್ಯ ಖಾವಂದರು ಯಶ್ ಬಳಿ ಸಿನಿಮಾದ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಮಂಜುನಾಥನ ದರ್ಶನ ಪಡೆದು ಪುನೀತರಾದರು.

ಕುಕ್ಕೆ ಹಾಗೂ ಧರ್ಮಸ್ಥಳ ಭೇಟಿ ಬಳಿಕ ಯಶ್ ಅವರು ಉಜಿರೆಯಲ್ಲಿರುವ ಇತಿಹಾಸ ಪ್ರಸಿದ್ಧ ಸುರ್ಯ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದಿದ್ದಾರೆ.