Home ದಕ್ಷಿಣ ಕನ್ನಡ ಬಂಟ್ವಾಳ : ಶೆಡ್ ಮೇಲೆ ಗುಡ್ಡ ಕುಸಿದು ಮೂವರು ಕಾರ್ಮಿಕರ ಸಾವು

ಬಂಟ್ವಾಳ : ಶೆಡ್ ಮೇಲೆ ಗುಡ್ಡ ಕುಸಿದು ಮೂವರು ಕಾರ್ಮಿಕರ ಸಾವು

Hindu neighbor gifts plot of land

Hindu neighbour gifts land to Muslim journalist

ಬಂಟ್ವಾಳ: ಕಾರ್ಮಿಕರು ವಾಸವಾಗಿದ್ದ ಮನೆಯ ಮೇಲೆ ಗುಡ್ಡವೊಂದು ಕುಸಿದು, ಶೆಡ್ ನೊಳಗೆ ಸಿಲುಕಿಕೊಂಡು ನಾಲ್ವರು ಕಾರ್ಮಿಕರ ಪೈಕಿ ಮೂವರು ಮೃತಪಟ್ಟಿದ್ದು, ಓರ್ವ ಕಾರ್ಮಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಬಿಜು ಪಾಲಕ್ಕಾಡ್ (45), ಸಂತೋಷ್ ಆಲಕ್ಕುಯ್ಯ(46) , ಬಾಬು ಕೊಟ್ಟಾಯಂ ಮೃತ ಕಾರ್ಮಿಕರಾಗಿದ್ದು (46 ಜಾನಿ ಕಣ್ಣೂರು ಎಂಬಾತನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇವರೆಲ್ಲ ರಬ್ಬರ್ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು.

ಪಂಜಿಕಲ್ಲು ಗ್ರಾಮದ ಮುಕ್ಕುಡ ಎಂಬಲ್ಲಿ ಹೆನ್ರಿ ಕಾರ್ಲೊ ಎಂಬವರ ಮನೆಯ ರಬ್ಬರ್ ತೋಟದಲ್ಲಿ ಕೆಲಸ ಮಾಡುತ್ತಿದ್ದ ಐವರ ಪೈಕಿ ನಾಲ್ವರು ಗುಡ್ಡ ಜರಿದು ಮನೆಯೊಳಗೆ ಸಿಲುಕಿಕೊಂಡಿದ್ದರು, ಅದರಲ್ಲಿ ಮೂವರನ್ನು ಜೆಸಿಬಿ ಮೂಲಕ ರಕ್ಷಣೆ ಮಾಡಲಾಗಿದೆ. ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದ ಎಂಬ ಮಾಹಿತಿ ಬಂದಿದೆ. ಉಳಿದಂತೆ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ರಾತ್ರಿ ಮೃತಪಟ್ಟ ಬಗ್ಗೆ ಮಾಹಿತಿ ಲಭ್ಯವಾಗಿದೆ.