Homeದಕ್ಷಿಣ ಕನ್ನಡಮಂಗಳೂರು : ವಿದ್ಯಾರ್ಥಿನಿಗೆ ರೈಲು ಬಡಿದು ದಾರುಣ ಮೃತ್ಯು !

ಮಂಗಳೂರು : ವಿದ್ಯಾರ್ಥಿನಿಗೆ ರೈಲು ಬಡಿದು ದಾರುಣ ಮೃತ್ಯು !

Hindu neighbor gifts plot of land

Hindu neighbour gifts land to Muslim journalist

ಮಂಗಳೂರು : ಕಾಲೇಜು ವಿದ್ಯಾರ್ಥಿನಿಯೋರ್ವಳು ರೈಲು ಬಡಿದು ದಾರುಣವಾಗಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆಯೊಂದು ಕಾಸರಗೋಡಿನಲ್ಲಿ ನಡೆದಿದೆ. ಮಂಗಳೂರು ಸೈಂಟ್ ಅಲೋಶಿಯಸ್ ಕಾಲೇಜಿನ ಎಂಎಸ್ಸಿ ಬಯೋ ಕೆಮಿಸ್ಟ್ರಿ ವಿದ್ಯಾರ್ಥಿನಿಯಾದ ಅಂಜನಾ ಎಸ್ ( 22) ಮೃತಪಟ್ಟ ವಿದ್ಯಾರ್ಥಿನಿ.

ಚೌಕಿ ಕಾವುಗೋಳಿ ಕಡಪ್ಪುರದ ಸುರೇಂದ್ರನ್ ರವರ ಪುತ್ರಿ.

ಮಂಗಳೂರು ಸೈ೦ಟ್ ಅಲೋಶಿಯಸ್ ಕಾಲೇಜಿನ ಎಂ ಎಸ್ಸಿ ಬಯೋ ಕೆಮಿಸ್ಟ್ರಿ ವಿದ್ಯಾರ್ಥಿನಿಯಾಗಿದ್ದಳು. ಸೋಮವಾರ ರಾತ್ರಿ ಊಟ ಮಾಡಿ ಮಲಗಿದ್ದ ಅಂಜನಾ ಬೆಳಿಗ್ಗೆ ಮನೆಯವರು ಎದ್ದಾಗ ನಾಪತ್ತೆಯಾಗಿದ್ದಳು.

ಹುಡುಕಾಡಿದಾಗ ಮನೆಯ ಅಲ್ಪ ದೂರದ ರೈಲು ಹಳಿ ಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಈಕೆಯ ಮೊಬೈಲ್ ನಜ್ಜುಗುಜ್ಜಾದ ಸ್ಥಿತಿಯಲ್ಲಿ ಹಳಿ ಪಕ್ಕದಲ್ಲಿ ಪತ್ತೆಯಾಗಿದೆ. ಕಾಸರಗೋಡು ನಗರ ಠಾಣಾ ಪೊಲೀಸರು ಮಹಜರು ನಡೆಸಿದರು.

RELATED ARTICLES

Most Popular

Recent Comments