Home ದಕ್ಷಿಣ ಕನ್ನಡ ಮಂಗಳೂರು: ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಸ್ಕೂಟರ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಯಿಂದ ಲೈಂಗಿಕ ಕಿರುಕುಳ, ದೂರು...

ಮಂಗಳೂರು: ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಸ್ಕೂಟರ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಯಿಂದ ಲೈಂಗಿಕ ಕಿರುಕುಳ, ದೂರು ದಾಖಲು

Hindu neighbor gifts plot of land

Hindu neighbour gifts land to Muslim journalist

ಮಂಗಳೂರು: ಸ್ಕೂಟರಿನಲ್ಲಿ ಬಂದ ಅಪರಿಚಿತ ವ್ಯಕ್ತಿಯೋರ್ವ ಶಾಲೆಗೆ ತೆರಳುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ತಲಪಾಡಿ ಅಲಂಕಾರುಗುಡ್ಡೆ ಬಳಿ ಇಂದು ನಡೆದಿದೆ.

ಕೋಟೆಕಾರು ಬಳಿಯ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ ತಲಪಾಡಿ ಚೆಕ್ ಪೋಸ್ಟ್ ಬಳಿ ಬಸ್ಸು ಹತ್ತಲು ಒಳದಾರಿಯಾಗಿ ನಡೆದುಕೊಂಡು ಬರುವಾಗ ಈ ಘಟನೆ ನಡೆದಿದೆ. ವಿದ್ಯಾರ್ಥಿನಿ ಗಾಬರಿಗೊಂಡು ಬೊಬ್ಬಿಟ್ಟಾಗ ಸ್ಥಳೀಯರು ಜಮಾಯಿಸುವಷ್ಟರಲ್ಲಿ ಆರೋಪಿ ಪರಾರಿಯಾಗಿದ್ದಾನೆ. ಸ್ಥಳೀಯರು ವಿದ್ಯಾರ್ಥಿನಿಗೆ ಧೈರ್ಯ ತುಂಬಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ತೆರಳಿ ಆರೋಪಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ. ಸಿಸಿಟಿವಿಯಲ್ಲಿ ಆರೋಪಿ ಸ್ಕೂಟರ್ ನಲ್ಲಿ ತೆರಳುತ್ತಿರುವ ದೃಶ್ಯ ದಾಖಲಾಗಿದ್ದು, ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ.

ಸ್ಥಳೀಯವಾಗಿ ಹಲವು ಕಾರ್ಖಾನೆಗಳಿಗೆ ವಲಸೆ ಕಾರ್ಮಿಕರು ಬಂದಿದ್ದು, ಅವರ ದಾಖಲೆಗಳನ್ನು ಪೊಲೀಸ್ ಠಾಣೆಯಲ್ಲಿ ಮಾಲಿಕರು ದಾಖಲಿಸಿರುವುದಿಲ್ಲ. ಅಲ್ಲದೆ ಈ ಭಾಗದಲ್ಲಿ ಇಂತಹ ಕೃತ್ಯಗಳು ಅನೇಕ ನಡೆಯುತ್ತಿದ್ದು, ಈ ಬಗ್ಗೆ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಗಮನಕ್ಕೆ ತಂದಿದ್ದರೂ, ಕ್ರಮ ವಹಿಸಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ.