Home » ಬೆಳ್ತಂಗಡಿ : ಮಸೀದಿಗೆ ದುಷ್ಕರ್ಮಿಗಳಿಂದ ಬಿಯರ್ ಬಾಟಲಿ ಎಸೆತ | ಸ್ಥಳದಲ್ಲಿ ಬಿಗುವಿನ ವಾತಾವರಣ

ಬೆಳ್ತಂಗಡಿ : ಮಸೀದಿಗೆ ದುಷ್ಕರ್ಮಿಗಳಿಂದ ಬಿಯರ್ ಬಾಟಲಿ ಎಸೆತ | ಸ್ಥಳದಲ್ಲಿ ಬಿಗುವಿನ ವಾತಾವರಣ

0 comments

ಮಂಗಳೂರು : ಮಸೀದಿಗೆ ದುಷ್ಕರ್ಮಿಗಳ ತಂಡವೊಂದು ಬಿಯರ್ ಬಾಟಲಿ‌ ಎಸೆದು ದಾಂಧಲೆ ನಡೆಸಿರುವ ಘಟನೆಯೊಂದು ಸಮೀಪದ ಮುರ ಎಂಬಲ್ಲಿ ಬುಧವಾರದಂದು ತಡರಾತ್ರಿ ನಡೆದಿದೆ.

ದುಷ್ಕರ್ಮಿಗಳ ಕುಕೃತ್ಯವು ಸ್ಥಳದಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಘಟನೆಯಿಂದಾಗಿ ಸ್ಥಳೀಯರಲ್ಲಿ ಆತಂಕ ಮೂಡಿದೆ.

ಮಸೀದಿಗೆ ಹಾನಿಯುಂಟಾಗಿದ್ದು ಜೊತೆಗೆ ಅಲ್ಲೇ ಸ್ಥಳದಲ್ಲಿ ನಿಲ್ಲಿಸಲಾಗಿದ್ದ ಕಾರಿಗೆ ಕೂಡಾ ಹಾನಿಯಾಗಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ತೆರಳಿದ್ದು ಪರಿಶೀಲನೆ ನಡೆಸಿ, ತನಿಖೆ ಮುಂದುವರಿಸಿದ್ದಾರೆ.

banner

You may also like

Leave a Comment