Home ದಕ್ಷಿಣ ಕನ್ನಡ ಮಂಗಳೂರು: ಮೂಲ್ಕಿ ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ಶವ ಪತ್ತೆ !! | ಕಲ್ಲಿನಿಂದ ಜಜ್ಜಿ ಕೊಲೆ...

ಮಂಗಳೂರು: ಮೂಲ್ಕಿ ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ಶವ ಪತ್ತೆ !! | ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಶಂಕೆ

Hindu neighbor gifts plot of land

Hindu neighbour gifts land to Muslim journalist

ವ್ಯಕ್ತಿಯೋರ್ವನ ಶವ ಮುಖ ಸಂಪೂರ್ಣ ನಜ್ಜುಗುಜ್ಜಾದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಇಂದು ಬೆಳಗ್ಗೆ ಮೂಲ್ಕಿ ಬಸ್ ನಿಲ್ದಾಣದಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಕಾರ್ಕಳದ ಮುಂಡ್ಕೂರಿನ ಕಟ್ಟಡ ನಿರ್ಮಾಣ ಕಾರ್ಮಿಕ ಹರೀಶ್ ಸಾಲ್ಯಾನ್ (37) ಎಂದು ಗುರುತಿಸಲಾಗಿದೆ.

ಪ್ರಾಥಮಿಕ ತನಿಖೆ ವೇಳೆ ಮುಖಕ್ಕೆ ಕಲ್ಲಿನಿಂದ ಜಜ್ಜಿರುವುದು ಗೊತ್ತಾಗಿದ್ದು, ಇದೊಂದು ಕೊಲೆಯೋ ಎಂಬ ಶಂಕೆ ವ್ಯಕ್ತವಾಗಿದೆ. ಈ ವ್ಯಕ್ತಿಯು ಶನಿವಾರ ರಾತ್ರಿ ಬಪ್ಪನಾಡು ದೇವಸ್ಥಾನ ಭೇಟಿಗೆಂದು ಆಗಮಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ವ್ಯಕ್ತಿಯ ಕಿಸೆಯಲ್ಲಿದ್ದ ಮೊಬೈಲ್ ಮತ್ತು ಪರ್ಸ್ ನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.