Home ದಕ್ಷಿಣ ಕನ್ನಡ ಮೈಸೂರಿನಲ್ಲಿ ಆತ್ಮಹತ್ಯೆಗೆ ಶರಣಾದ ಸುಳ್ಯದ ದಂಪತಿ!! ಪುತ್ರಿಯ ವಿವಾಹವಾಗಿ ಒಂದು ವರ್ಷದಲ್ಲೇ ಸಾವಿನ ನಿರ್ಧಾರಕ್ಕೆ ಕಾರಣವೇನು!??

ಮೈಸೂರಿನಲ್ಲಿ ಆತ್ಮಹತ್ಯೆಗೆ ಶರಣಾದ ಸುಳ್ಯದ ದಂಪತಿ!! ಪುತ್ರಿಯ ವಿವಾಹವಾಗಿ ಒಂದು ವರ್ಷದಲ್ಲೇ ಸಾವಿನ ನಿರ್ಧಾರಕ್ಕೆ ಕಾರಣವೇನು!??

Hindu neighbor gifts plot of land

Hindu neighbour gifts land to Muslim journalist

ಸುಳ್ಯ : ಮೂರು ವರ್ಷದಿಂದ ಮೈಸೂರಿನಲ್ಲಿ ನೆಲೆಸಿದ್ದ ಸುಳ್ಯದ ಕುಕ್ಕಾಜೆಕಾನದ ದಂಪತಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಮಾಧವ ನಾಯ್ಕ್ (56) ಮತ್ತು ಅವರ ಪತ್ನಿ ಉಷಾ ಎಂದು ಗುರುತಿಸಲಾಗಿದೆ.

ಸುಳ್ಯ ಕುಕ್ಕಾಜೆಕಾನದ ಮಾಧವ ನಾಯ್ಕ ರವರು 3 ವರ್ಷಗಳ ಹಿಂದೆ ಪತ್ನಿ, ಪುತ್ರಿ ಸಮೇತ ಮೈಸೂರಿಗೆ ಹೋಗಿ ಅಲ್ಲಿ ನಡೆಸಿದ್ದು, ಕಳೆದ ವರ್ಷ ಪುತ್ರಿಯ ಮದುವೆ ಕೂಡ ಮಾಡಿಸಿದ್ದು, ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಮಗಳಿಗೆ ಮದುವೆ ಮಾಡಿಸಿ ಒಂದು ವರ್ಷದಲ್ಲೇ ದಂಪತಿಗಳು ಈ ರೀತಿಯ ದುಡುಕಿನ ನಿರ್ಧಾರ ಮಾಡಿರುವುದಕ್ಕೆ ಕಾರಣ ಏನೆಂದು ತಿಳಿದುಬಂದಿಲ್ಲ.

ಮೃತದೇಹಗಳನ್ನು ಏ.17 ರಂದು ರಾತ್ರಿ ಸುಳ್ಯ ಕುಕ್ಕಾಜೆಕಾನಕ್ಕೆ ತಂದು ಅಂತ್ಯಸಂಸ್ಕಾರ ನೆರವೇರಿಸಲಾಯಿತು.

ಮೈಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಮಹಜರು ನಡೆಸಲಾಗಿದೆ.