Home ದಕ್ಷಿಣ ಕನ್ನಡ ನವೀನ್ ಕಾಮಧೇನು ಅಪಹರಣ ಪ್ರಕರಣಕ್ಕೆ ತಿರುವು | ಚಿನ್ನಾಭರಣ ಕಳ್ಳತನ ಆರೋಪ ಹೊರಿಸಿ ಅತ್ತೆ ,ಮೈದುನರ...

ನವೀನ್ ಕಾಮಧೇನು ಅಪಹರಣ ಪ್ರಕರಣಕ್ಕೆ ತಿರುವು | ಚಿನ್ನಾಭರಣ ಕಳ್ಳತನ ಆರೋಪ ಹೊರಿಸಿ ಅತ್ತೆ ,ಮೈದುನರ ಮೇಲೆ ಸ್ಪಂದನಾರಿಂದ ಪೊಲೀಸ್ ದೂರು

Hindu neighbor gifts plot of land

Hindu neighbour gifts land to Muslim journalist

ಬೆಳ್ಳಾರೆಯ ಕಾವಿನಮೂಲೆಯಲ್ಲಿ ಮನೆಯಿಂದ ಚಿನ್ನಾಭರಣ ಕಳವು ಆಗಿರುವುದಾಗಿ ಕಾಮಧೇನು ಮಾಧವ ಗೌಡರ ಸೊಸೆ ಸ್ಪಂದನ ನವೀನ್ ರವರು ಪೊಲೀಸರಿಗೆ ದೂರು ನೀಡಿದ ಘಟನೆ ಡಿ.23 ರಂದು ನಡೆದಿದೆ.

ದೂರಿನಲ್ಲಿ ” ನನ್ನ ಗಂಡ ನವೀನ ಎಂ. ಅತಿಯಾದ ಮದ್ಯ ವ್ಯಸನಿಯಾಗಿದ್ದು ವೈವಾಹಿಕ ಜೀವನದಲ್ಲಿ ನೊಂದು ಬೇಸತ್ತಿದ್ದೇನೆ. ಕಳೆದ ಕೆಲವು ತಿಂಗಳುಗಳಿಂದ ಇವರ ಮದ್ಯವ್ಯಸನದಿಂದ ಸಹಿಸಲು ಅಸಾಧ್ಯವಾದ ಹಂತಕ್ಕೆ ತಲುಪಿದ್ದು ಇವರ ತಂದೆ ಮಾಧವ ಗೌಡರವರು ಮದ್ಯ ವ್ಯಸನ ಮುಕ್ತ ಚಿಕಿತ್ಸೆಗಾಗಿ ಬೆಂಗಳೂರಿನ ಕಡಂಬಸ್ ಆಸ್ಪತ್ರೆಗೆ ದಾಖಲಿಸಲು ತೀರ್ಮಾನಿಸಿದ್ದರು. ಅದರಂತೆ ಇವರನ್ನು ಕಡಂಬಸ್ ಆಸ್ಪತ್ರೆಗೆ ದಾಖಲು ಮಾಡಿದ್ದು ಈ ಬಗ್ಗೆ ನೀರಜಾಕ್ಷಿಯವರು ಮಾಧವ ಗೌಡ, ದಿವ್ಯಪ್ರಭಾ, ಪರಶುರಾಮ, ಸ್ಪಂದನ, ಸ್ಪರ್ಶಿತ್ ಹಾಗೂ ನವೀನ ರೈ ಎಂಬವರ ಮೇಲೆ ಪೊಲೀಸ್ ದೂರು ಕೊಟ್ಟಿದ್ದು ಅದರಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಾವು ಜಾಮೀನು ಪಡೆದು ಮನೆಯ ಒಳಗೆ ಹೋಗಿ ನೋಡಿದಾಗ ಮನೆಯಿಂದ ಲಾಕರ್ ತೆಗೆದಿದ್ದು ಅದರ ಒಳಗಿದ್ದ ಚಿನ್ನಾಭರಣಗಳು, ವಜ್ರದ ಹಾರ,ನೆಕ್ಲಸ್, ಉಂಗುರ, ಕಿವಿಯ ಓಲೆಗಳು, ಕರಿಮಣಿ ತಾಳಿ ಚೈನು ಹಾಗೂ ಇತರ ಚಿನ್ನಾಭರಣಗಳು ಮತ್ತು ರಶೀದಿಗಳು ಕಳವಾಗಿರುತ್ತದೆ. ಈ ಚಿನ್ನಾಭರಣಗಳನ್ನು ನೀರಜಾಕ್ಷಿ, ತಾರಾ ಕುಮಾರಿ, ವಿನ್ಯಾಸ್, ಪ್ರಜ್ಞಾ ಎಂಬವರು ಕಳ್ಳತನ ಮಾಡಿರುವುದಾಗಿ ಬಲವಾದ ಸಂಶಯವಿದ್ದು ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ” ಎಂದು ಸ್ಪಂದನಾ ತಿಳಿಸಿದ್ದಾರೆ.

ಏನಿದು ಘಟನೆ?

ಡಿ. 19 ರಂದು ಮಧ್ಯಾಹ್ನ ಆಂಬ್ಯುಲೆನ್ಸ್ ಸಹಿತ ಕೆಲವು ವಾಹನಗಳಲ್ಲಿ ಬಂದ ತಂಡವೊಂದು ಬೆಳ್ಳಾರೆ ಸಮೀಪದ ಕಾವಿನ ಮೂಲೆಯಲ್ಲಿರುವ ತನ್ನ ಮನೆಯ ಅಂಗಲದಲ್ಲಿದ್ದ ನವೀನ್ ಗೌಡ ರವರನ್ನು ಬಲವಂತವಾಗಿ ಅಂಬ್ಯುಲೆನ್ಸ್ ನಲ್ಲಿ ಹಾಕಿ ಕರೆದುಕೊಂಡು ಹೋಗಿತ್ತು.

ಅಪಹರಣಕ್ಕೊಳಗಾದ ನವೀನ್ ಅವರ ತಂದೆ ಮಾಧವ ಗೌಡ, ನವಿನ್ ಅವರ ಪತ್ನಿ ಸ್ಪಂದನ ಚಿಲ್ತಡ್ಕ, ಕಾಂಗ್ರೆಸ್ ಪಕ್ಷದ ಮಹಿಳಾ ನಾಯಕಿ ಹಾಗೂ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ದಿವ್ಯ ಪ್ರಭಾ ಚಿಲ್ಲಡ್ಕ (ಸ್ಪಂದನ ರವರ ತಾಯಿ), ಪರುಶುರಾಮ್ , ಸ್ಪರ್ಶಿತ್ ಹಾಗೂ ನವೀನ್ ರೈ ತಂಬಿನಮಕ್ಕಿ ಅವರ ಮೇಲೆ ದೂರು ನೀಡಲಾಗಿತ್ತು.

ನವೀನ್ ಅವರ ತಾಯಿ ನೀಡಿದ ದೂರಿನಂತೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನವೀನ್ ಪತ್ನಿ ಸ್ಪಂದನಾ ಅವರು ಬೆಳ್ಳಾರೆ ಕ್ರೈಂ ಎಸೈ ಆನಂದ ಎಂಬವರ ಜತೆ ಲಾಡ್ಜ್ ನಲ್ಲಿ ಇರುವುದನ್ನು ನೋಡಿದ ಬಳಿಕ ನವೀನ್ ಕುಮಾರ್ ಹಾಗೂ ಆತನ ಪತ್ನಿ ಸ್ಪಂದನಳ ಮಧ್ಯೆ ವೈಮನಸ್ಸು ಉಂಟಾಗಿ ಸ್ಪಂದನಳು ತವರು ಮನೆಗೆ ಹೋಗಿದ್ದರು ಎನ್ನಲಾಗಿದೆ.

ಡಿ 18 ರಂದು ಸೊಸೆ ಸ್ಪಂದನ, ಆಕೆಯ ಹೆತ್ತವರಾದ ಪರಶುರಾಮ, ದಿವ್ಯಪ್ರಭಾ ಚಿಲ್ಲಡ್ಕ ತಮ್ಮಸ್ಪರ್ಶಿತ್ ಹಾಗೂ ಸಂಬಂಧಿಕರು ಬಂದು ಮಾತುಕತೆ ನಡೆಸಿದ್ದಾರೆ, ಆ ವೇಳೆ ನವೀನ್ ಕುಮಾರ್ ಪತ್ನಿ ಸ್ಪಂದನಳು ಬೇಡ ಎಂಬುದಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಬಳಿಕ ನವೀನ್ ಅವರ ಅಪಹರಣ ನಡೆದಿತ್ತು.