Home ದಕ್ಷಿಣ ಕನ್ನಡ ಪುತ್ತೂರು : ದ್ವಿಚಕ್ರ ವಾಹನಗಳ ನಡುವೆ ಅಪಘಾತ ,ಓರ್ವ ಸಾವು,ಇನ್ನೋರ್ವರಿಗೆ ಗಾಯ

ಪುತ್ತೂರು : ದ್ವಿಚಕ್ರ ವಾಹನಗಳ ನಡುವೆ ಅಪಘಾತ ,ಓರ್ವ ಸಾವು,ಇನ್ನೋರ್ವರಿಗೆ ಗಾಯ

Hindu neighbor gifts plot of land

Hindu neighbour gifts land to Muslim journalist

ಪುತ್ತೂರು: ದ್ವಿಚಕ್ರ ವಾಹನಗಳ ಮಧ್ಯೆ ಡಿಕ್ಕಿ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ಡಿ.20 ರಂದು ಕುಂಬ್ರ ಸಮೀಪದ ಕೊಲ್ಲಾಜೆ ಎಂಬಲ್ಲಿ ನಡೆದಿದ್ದು, ಅಪಘಾತದಿಂದ ಗಂಭೀರ ಗಾಯಗೊಂಡ ಸ್ಕೂಟರ್ ಸವಾರ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಕೊಲ್ಲಾಜೆ ಒಳರಸ್ತೆಯಿಂದ ಸೆಲ್ವಂ ಚಲಾಯಿಸಿಕೊಂಡು ಬರುತ್ತಿದ್ದ ಟಿವಿಎಸ್ ಜುಪಿಟರ್ ದ್ವಿಚಕ್ರ ವಾಹನ ಮುಖ್ಯ ರಸ್ತೆಗೆ ಎಂಟ್ರಿ ಕೊಡುತ್ತಿದ್ದ ವೇಳೆ ಕೆಯ್ಯೂರು ಕಡೆಯಿಂದ ಕುಂಬ್ರ ಕಡೆಗೆ ಹೋಗುತ್ತಿದ್ದ ಕೆ.ಟಿ.ಎಂ ಬೈಕ್ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಎರಡೂ ದ್ವಿಚಕ್ರ ಸವಾರರು ರಸ್ತೆಗೆಸೆಯಲ್ಪಟ್ಟಿದ್ದು ಬೈಕ್ ಸಮೀಪದ ಚರಂಡಿಗೆ ಉರುಳಿ ಬಿದ್ದಿದೆ.

ಜುಪಿಟರ್ ಸವಾರ ರಬ್ಬರ್ ಟ್ಯಾಪಿಂಗ್ ಕಾರ್ಮಿಕ ಸೆಲ್ವಂ ಗಂಭೀರ ಸ್ವರೂಪದ ಗಾಯಗಳೊಂದಿಗೆ ರಸ್ತೆ ಮಧ್ಯೆದಲ್ಲಿ ಬಿದ್ದಿದ್ದ ಎನ್ನಲಾಗಿದೆ. ಕೆಟಿಎಂ ಬೈಕ್ ಸವಾರನು ಗಂಭೀರ ಗಾಯಗೊಂಡಿದ್ದು, ಆತ ಪುತ್ತೂರು ಖಾಸಗಿ ಕಾಲೇಜಿನ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ಅನೇಕ ಆಟೋ ರಿಕ್ಷಾ ಚಾಲಕರು ನಿರಾಕರಿಸಿದ್ದು, ಕುಂಬ್ರದ ಅಬ್ಬಾಸ್ ಎಂಬವರು ತಮ್ಮ ಆಪೆ ರಿಕ್ಷಾದಲ್ಲಿ ಕರೆದುಕೊಂಡು ಹೋಗಲು ಮುಂದಾಗಿ ಇಬ್ಬರೂ ಗಾಯಾಳುಗಳನ್ನು ಆಪೆ ರಿಕ್ಷಾದ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ತಿಳಿದು ಬಂದಿದೆ.ಆಸ್ಪತ್ರೆಯಲ್ಲಿ ಸೆಲ್ವಂ ಮೃತಪಟ್ಟರು ಎನ್ನಲಾಗಿದೆ.