Homeದಕ್ಷಿಣ ಕನ್ನಡಪುತ್ತೂರು : ವಿದ್ಯಾಮಾತಾ ಅಕಾಡೆಮಿಗೆ ಚಾಣಕ್ಯ ಅಕಾಡೆಮಿ ವಿಜಯಪುರ ಮುಖ್ಯಸ್ಥ ಎನ್ . ಎಮ್ ಬಿರಾದರ...

ಪುತ್ತೂರು : ವಿದ್ಯಾಮಾತಾ ಅಕಾಡೆಮಿಗೆ ಚಾಣಕ್ಯ ಅಕಾಡೆಮಿ ವಿಜಯಪುರ ಮುಖ್ಯಸ್ಥ ಎನ್ . ಎಮ್ ಬಿರಾದರ ಭೇಟಿ

Hindu neighbor gifts plot of land

Hindu neighbour gifts land to Muslim journalist

ಪುತ್ತೂರು : ಇಲ್ಲಿನ ಎಪಿಯಂಸಿ ರಸ್ತೆಯಲ್ಲಿ ಕಾರ್ಯಾಚರಿಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ ‘ವಿದ್ಯಾಮಾತಾ ಅಕಾಡೆಮಿ’ ಮತ್ತು ‘ವಿದ್ಯಾಮಾತಾ ಫೌಂಡೇಶನ್’ ನ ಪ್ರಧಾನ ಕಚೇರಿಗೆ ಕರ್ನಾಟಕ ರಾಜ್ಯದಲ್ಲೇ ಅತ್ಯಂತ ಹೆಸರುವಾಸಿಯಾಗಿರುವ ಮತ್ತು ಸಾವಿರಾರು ಜನರಿಗೆ ಸರಕಾರಿ ಉದ್ಯೋಗ ಲಭಿಸಲು ಕಾರಣಕರ್ತರಾಗಿರುವ ‘ಚಾಣಕ್ಯ ಅಕಾಡೆಮಿ’ ವಿಜಯಪುರ ಇಲ್ಲಿನ ಮುಖ್ಯಸ್ಥರಾದ ಎನ್.ಎಮ್.ಬಿರಾದರ ಅವರು ಭೇಟಿ ನೀಡಿದರು.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸ್ ನೇಮಕಾತಿ, ಬ್ಯಾಂಕಿಂಗ್ ಸೇರಿದಂತೆ ಐಎಎಸ್ ವರೆಗಿನ ಹುದ್ದೆಗಳಿಗೆ ತರಬೇತಿಯನ್ನು ನೀಡುತ್ತಿರುವ ವಿದ್ಯಾಮಾತಾ ಅಕಾಡೆಮಿಯ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆಯನ್ನು ಸೂಚಿಸಿದರು. ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿಯನ್ನು ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವತಯಾರಿ ಬಗ್ಗೆ ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಎನ್. ಎಮ್. ಬಿರಾದರ ಅವರನ್ನು ವಿದ್ಯಾಮಾತಾ ಅಕಾಡೆಮಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕರಾಗಿರುವ ಭಾಗ್ಯೇಶ್ ರೈ ಅವರು “ನನ್ನ ಆತ್ಮೀಯರಾಗಿರುವ ಎನ್.ಎಮ್.ಬಿರಾದರ ರವರು ನಮ್ಮ ಸಂಸ್ಥೆಗೆ ಬಂದಿರುವುದು ಅತ್ಯಂತ ಸಂತೋಷದ ವಿಷಯ, ಮುಂದೆ ವಿದ್ಯಾಮಾತಾ ಅಕಾಡೆಮಿಯಲ್ಲಿ ಐಎಎಸ್ / ಐಪಿಎಸ್ ತರಬೇತಿಯನ್ನು ಚಾಣಕ್ಯ ಅಕಾಡೆಮಿಯ ಸಹಯೋಗದಲ್ಲಿ ಪ್ರಾರಂಭಿಸುವ ಯೋಜನೆಯಿದೆ. ಈ ನಿಟ್ಟಿನಲ್ಲಿ ಎನ್ ಎಮ್ ಬಿರಾದರ ರವರ ಸಹಕಾರ ಅತ್ಯಗತ್ಯ” ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಖ್ಯಾತ ಲೇಖಕರು, ವಿದ್ಯಾಮಾತಾ ಅಕಾಡೆಮಿಯ ಮಾರ್ಗದರ್ಶಕರು ಆದ ಅರವಿಂದ ಚೊಕ್ಕಾಡಿ ಯವರು , ಗಾಂಧಿ ವಿಚಾರ ವೇದಿಕೆಯ ಅಧ್ಯಕ್ಷ ಶ್ರೀಧರ ಭಿಡೆ, ಖ್ಯಾತ ಮನೋವೈದ್ಯರಾದ ಡಾ.ಪಿ.ವಿ.ಭಂಡಾರಿ ಮೊದಲಾದವರು ವಿದ್ಯಾಮಾತಾ ಅಕಾಡೆಮಿಯ ಕಾರ್ಯಕ್ರಮಗಳಿಗೆ ಶುಭಹಾರೈಸಿದರು.

Praveen Chennavara
Praveen Chennavara Palthady village & post Kadaba Taluq D.K.-For contact- 7090806456
RELATED ARTICLES

Most Popular

Recent Comments