Home ದಕ್ಷಿಣ ಕನ್ನಡ ಪುತ್ತೂರು: ಬೈಕ್ ನಿಂದ ರಸ್ತೆಗೆ ಎಸೆಯಲ್ಪಟ್ಟು ಮಹಿಳೆ ದಾರುಣ ಸಾವು

ಪುತ್ತೂರು: ಬೈಕ್ ನಿಂದ ರಸ್ತೆಗೆ ಎಸೆಯಲ್ಪಟ್ಟು ಮಹಿಳೆ ದಾರುಣ ಸಾವು

Hindu neighbor gifts plot of land

Hindu neighbour gifts land to Muslim journalist

ಬೈಕ್‍ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ರಸ್ತೆಗೆಸೆಯಲ್ಪಟ್ಟು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿ ಗ್ರಾಮದ ಕೋರಿಯ ಎಂಬಲ್ಲಿ ಸಂಭವಿಸಿದೆ.

ಮೃತರನ್ನು ಬೆಳ್ಳಿಪ್ಪಾಡಿ ಅಳಿಮೆ ನಿವಾಸಿ ಸೇಸಪ್ಪ ಗೌಡ ಎಂಬವರ ಪತ್ನಿ ಗಿರಿಜಾ (62) ಎಂದು ಗುರುತಿಸಲಾಗಿದೆ.

ಗಿರಿಜಾ ಅವರು ತನ್ನ ಸಂಬಂಧಿಕ ದಿವಾಕರ ಎಂಬವರ ಬೈಕ್‍ನಲ್ಲಿ ಹೋಗುತ್ತಿದ್ದ ವೇಳೆಯಲ್ಲಿ ಕೋರಿಯ ಎಂಬಲ್ಲಿ ರಸ್ತೆ ಹಂಪ್‍ನಲ್ಲಿ ಬೈಕ್‍ನಿಂದ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆತರಲಾಯಿತಾದರೂ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

ಘಟನೆಯ ಕುರಿತು ಪುತ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.