Homeದಕ್ಷಿಣ ಕನ್ನಡಪುತ್ತೂರು : ಬೆಳ್ಳಂಬೆಳಗ್ಗೆ ಕೋಡಿಂಬಾಡಿಯಲ್ಲಿ ಬಸ್ಸು - ಕಾರು ಅಪಘಾತ| ಸಂಚಾರ ಅಸ್ತವ್ಯಸ್ತ!!!

ಪುತ್ತೂರು : ಬೆಳ್ಳಂಬೆಳಗ್ಗೆ ಕೋಡಿಂಬಾಡಿಯಲ್ಲಿ ಬಸ್ಸು – ಕಾರು ಅಪಘಾತ| ಸಂಚಾರ ಅಸ್ತವ್ಯಸ್ತ!!!

Hindu neighbor gifts plot of land

Hindu neighbour gifts land to Muslim journalist

ಪುತ್ತೂರು : ಇಂದು ( ಮೇ.21) ಬೆಳಿಗ್ಗೆ 7.30 ರ ಸುಮಾರಿಗೆ ಪುತ್ತೂರು – ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕೋಡಿಂಬಾಡಿಯಲ್ಲಿ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಬಸ್ಸು ಹಾಗೂ ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಘಟನೆಯೊಂದು ಸಂಭವಿಸಿದೆ. ಕೋಡಿಂಬಾಡಿಯ ವಿನಾಯಕ ನಗರದ ಬಳಿ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನಕ್ಕೆ ತೆರಳುವ ದ್ವಾರದ ಬಳಿ ಈ ದುರ್ಘಟನೆ ಸಂಭವಿಸಿದೆ.

ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಬೆಂಗಳೂರಿನಿಂದ ಪುತ್ತೂರಿಗೆ ಆಗಮಿಸುತ್ತಿದ್ದ ರಾಜ ಹಂಸ ಬಸ್ (KA21 F 0239) ಹಾಗೂ ಪುತ್ತೂರಿನಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಕೇರಳ ನೋಂದಣಿ ಹೊಂದಿದ್ದ ಕಾರು ಅಪಘಾತಕ್ಕೆ ಒಳಗಾದ ವಾಹನಗಳು.

ಅಪಘಾತದಲ್ಲಿ ಯಾರಿಗೂ ಯಾವುದೇ ಪ್ರಾಣ ಹಾನಿ ಉಂಟಾಗಿಲ್ಲ. ಯಾವುದೇ ಗಂಭೀರ ಗಾಯ ಆಗಿಲ್ಲ. ಅಪಘಾತದಿಂದ ವಾಹನ ಸಂಚಾರ ಸ್ವಲ್ಪ ಹೊತ್ತು ಅಸ್ತವ್ಯಸ್ತ ಉಂಟಾಗಿತ್ತು. ಕೂಡಲೇ ಸ್ಥಳೀಯರು ರಸ್ತೆ ತೆರವು ಮಾಡುವ ಮೂಲಕ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿದರು.

RELATED ARTICLES

Most Popular

Recent Comments