Homeದಕ್ಷಿಣ ಕನ್ನಡಮಂಗಳೂರು : ಅಜ್ಜಿ ಮನೆಗೆಂದು ಏಕಾಂಗಿಯಾಗಿ ರೈಲಿ‌ನಲ್ಲಿ ತೆರಳಿದ ಬಾಲಕನ ಮೊಬೈಲ್ ಸ್ವಿಚ್ಡ್ ಆಫ್ !...

ಮಂಗಳೂರು : ಅಜ್ಜಿ ಮನೆಗೆಂದು ಏಕಾಂಗಿಯಾಗಿ ರೈಲಿ‌ನಲ್ಲಿ ತೆರಳಿದ ಬಾಲಕನ ಮೊಬೈಲ್ ಸ್ವಿಚ್ಡ್ ಆಫ್ ! ಗಾಬರಿಗೊಂಡ ತಂದೆಯಿಂದ ರೈಲ್ವೇ ಸಚಿವರಿಗೆ ಟ್ವೀಟ್ !!! ಅನಂತರ ಏನಾಯ್ತು?

Hindu neighbor gifts plot of land

Hindu neighbour gifts land to Muslim journalist

ಮಂಗಳೂರು: ಬಾಲಕನೋರ್ವ ಏಕಾಂಗಿಯಾಗಿ ರೈಲು ಪ್ರಯಾಣ ಮಾಡುವ ಸಂದರ್ಭದಲ್ಲಿ ಮೊಬೈಲ್ ಸ್ವಿಚ್ಡ್ ಆಫ್ ಆಗಿ, ಮೊಬೈಲ್ ಸಂಪರ್ಕಿಸಲು ಸಾಧ್ಯವಾಗದಿದ್ದಾಗ ಗಾಬರಿಗೊಂಡ ತಂದೆ ರೈಲ್ವೇ ಸಚಿವರಿಗೆ ಟ್ವಿಟ್ ಮಾಡಿದ್ದಾರೆ. ಅಷ್ಟು ಮಾತ್ರವಲ್ಲದೇ ಈ ಟ್ವೀಟ್ ಗೆ ಅರ್ಧ ಗಂಟೆಯೊಳಗೆ ಸ್ಪಂದಿಸಿದ ರೈಲ್ವೆ ಸಚಿವಾಲಯವು ಪುತ್ರನಿಂದಲೇ ತಂದೆಗೆ ಕರೆ ಮಾಡಿಸಿ ತಂದೆಯ ಗಾಬರಿಯನ್ನು ದೂರ ಮಾಡಿಸಿದೆ.

ನಡೆದದ್ದೇನು ? ಮಂಗಳೂರಿನ ಕಿಶನ್ ರಾವ್ ಎಂಬುವವರ ಪುತ್ರ ಶಂತನು ಏ.19ರಂದು ಏಕಾಂಗಿಯಾಗಿ ಮಂಗಳೂರಿನಿಂದ ಕೊಟ್ಟಾಯಂಗೆ ರೈಲು ಪ್ರಯಾಣ ಮಾಡಿದ್ದಾನೆ. ಶಂತನು ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ರಿಸಲ್ಟ್ ನಿರೀಕ್ಷೆಯಲ್ಲಿದ್ದನು.

ಪರೀಕ್ಷೆ ಮುಗಿದಿದ್ದರಿಂದ ಬಾಲಕ ಕೇರಳದ ಕೊಟ್ಟಾಯಂನಲ್ಲಿರುವ ತನ್ನ ತಾತನ ಮನೆಗೆ ಹೋಗಲು ರೆಡಿಯಾಗಿದ್ದ. ಆದರೆ ಹೆತ್ತವರಿಗೆ ಜೊತೆಗೆ ಹೋಗಲು
ಅನಾನುಕೂಲವಾದ್ದರಿಂದ ಬಾಲಕ ಏಕಾಂಗಿಯಾಗಿ ಪ್ರಯಾಣ ಬೆಳೆಸಿದ್ದಾನೆ. ಶಂತನು ಏಕಾಂಗಿಯಾಗಿ ಇದೇ ಮೊದಲ ಬಾರಿಗೆ ರೈಲು ಪ್ರಯಾಣ ಬೆಳೆಸಿದ್ದ. ಹಾಗಾಗಿ ಹೆತ್ತವರಿಗೆ ಸ್ವಲ್ಪ ಗಾಬರಿ ಇತ್ತು. ಆದರೂ ಮಗನಿಗೋಸ್ಕರ ಒಕೆ ಅಂದಿದ್ದಾರೆ.

ಕಿಶನ್ ರಾವ್ ಏ.19ರಂದು ಬೆಳ್ಳಂಬೆಳಗ್ಗೆ 5ಗಂಟೆ ಸುಮಾರಿಗೆ ತಮ್ಮ ಪುತ್ರ ಶಂತನುವನ್ನು ಮಂಗಳೂರು ಸೆಂಟ್ರಲ್ ಸ್ಟೇಷನ್‌ನಲ್ಲಿ ಪರಶುರಾಮ ಎಕ್ಸ್‌ಪ್ರೆಸ್ ರೈಲು ಹತ್ತಿಸಿದ್ದಾರೆ. ಈ ರೈಲು ಮಧ್ಯಾಹ್ನ 2.30ರ ವೇಳೆಗೆ ಪಿರವಂ ರೈಲು ನಿಲ್ದಾಣವನ್ನು ತಲುಪಬೇಕಿತ್ತು.
ರೈಲು ಮಂಗಳೂರಿನಿಂದ ಹೊರಡುವ ವೇಳೆ ಜೊತೆಗಿರಲಿ ಎಂದು ಮಗನಿಗೆ ತಂದೆ ಮೊಬೈಲ್ ಫೋನ್ ನೀಡಿದ್ದರು.

ರೈಲು ಮಂಗಳೂರಿನಿಂದ ಹೊರಟಿತ್ತು. ಬೆಳಿಗ್ಗೆ 10 ಗಂಟೆಗೆ ಪುತ್ರನಿಗೆ ಕರೆ ಮಾಡುತ್ತಿದ್ದಾಗ ಆತನ ಫೋನ್ ಸ್ವಿಚ್ ಆಫ್ ಆಗಿತ್ತು. ಮತ್ತೆ ಮತ್ತೆ ಪ್ರಯತ್ನಿಸಿದರೂ ಫೋನ್ ಸ್ವಿಚ್ ಆಫ್ ಎಂದೇ ಬರುತ್ತಿತ್ತು. ಇದರಿಂದ ದಿಗಿಲುಗೊಂಡ ತಂದೆ ಅನ್ಯ ಮಾರ್ಗವಿಲ್ಲದೇ ಆತನ ರೈಲ್ವೆ ಟಿಕೆಟ್ ನಂಬರ್ ಸಹಿತ ಕೇಂದ್ರದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಟ್ವೀಟ್ ಮಾಡಿದ್ದಾರೆ.

ತಕ್ಷಣ ಟ್ವೀಟ್ ಗಮನಿಸಿದ ರೈಲ್ವೇ ಸಚಿವಾಲಯ ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದೆ. ಕೂಡಲೇ ಕಾರ್ಯಪ್ರವೃತ್ತರಾದ ರೈಲ್ವೇ ಪೊಲೀಸರು ಬಾಲಕ ಶಂತನು ಪ್ರಯಾಣಿಸುತ್ತಿದ್ದ ರೈಲಿಗೆ ಬಂದು ಪರಿಶೀಲನೆ ನಡೆಸಿದ್ದಾರೆ.

ಬಳಿಕ ಆತನ ಇರುವಿಕೆಯನ್ನು ಸ್ಪಷ್ಟಪಡಿಸಿದ ರೈಲ್ವೆ ಪೊಲೀಸರು ತಕ್ಷಣ ತಂದೆ ಕಿಶನ್ ರಾವ್ ಅವರಿಗೆ ಕರೆ ಮಾಡಿಸಿದ್ದಾರೆ. ಅದರಂತೆ ಬೆಳಗ್ಗೆ 11 ರ ಸುಮಾರಿಗೆ ತಂದೆ ಕಿಶನ್ ರಾವ್ ಅವರಿಗೆ ಕರೆ ಮಾಡಿದ ಶಂತನು ‘ತಾನು ರೈಲಿನಲ್ಲಿ ನಿದ್ರೆಗೆ ಜಾರಿದ್ದೆ. ಅಚಾನಕ್ಕಾಗಿ ಫೋನ್ ಕೂಡಾ ಸ್ವಿಚ್ ಆಫ್ ಆಗಿತ್ತು. ನಾನು ಆರಾಮವಾಗಿದ್ದೇನೆ’ ಎಂದು ಹೇಳಿದ್ದಾನೆ. ತನ್ನ ಟ್ವಿಟ್‌ಗೆ ತುರ್ತಾಗಿ ಸ್ಪಂದಿಸಿ ರೈಲ್ವೆ ಸಚಿವಾಲಯ ಹಾಗೂ ರೈಲ್ವೇ ಪೊಲೀಸರ ಕಾರ್ಯಕ್ಕೆ ಕಿಶನ್ ರಾವ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

RELATED ARTICLES

Most Popular

Recent Comments