Home ದಕ್ಷಿಣ ಕನ್ನಡ ಸುಬ್ರಹ್ಮಣ್ಯ : ನದಿಯಲ್ಲಿ ಮೀನು ಹಿಡಿಯಲು ಹೋದ ಯುವಕನಿಗೆ ವಿದ್ಯುತ್ ಶಾಕ್ ಹೊಡೆದು ಸಾವು

ಸುಬ್ರಹ್ಮಣ್ಯ : ನದಿಯಲ್ಲಿ ಮೀನು ಹಿಡಿಯಲು ಹೋದ ಯುವಕನಿಗೆ ವಿದ್ಯುತ್ ಶಾಕ್ ಹೊಡೆದು ಸಾವು

Hindu neighbor gifts plot of land

Hindu neighbour gifts land to Muslim journalist

ಸುಬ್ರಹ್ಮಣ್ಯ : ದೇವಚಳ್ಳ ಗ್ರಾಮದ ಕರಂಗಲ್ಲಿನ 37 ರ ವಯೋಮಾನದ ಯುವಕನೋರ್ವ ನದಿಗೆ ಮೀನು ಹಿಡಿಯಲು ಹೋಗಿ ಕರೆಂಟ್ ಶಾಕ್ ಹೊಡೆದು ಮೃತಪಟ್ಟ ಘಟನೆ ವರದಿಯಾಗಿದೆ.

ನ.5 ರ ರಾತ್ರಿ ಕರಂಗಲ್ಲಿನ ದಿ. ಕೇಶವ ಗೌಡ ಅವರ ಪುತ್ರ ಕರಂಗಲ್ಲಿನ ಪ್ರಕಾಶ್ ಎಂಬವರು ಮಾಡಬಾಕಿಲು ಭಾಗದ ನದಿಗೆ ಗೆಳೆಯನೊಂದಿಗೆ ಹೋಗಿ ಬ್ಯಾಟರಿ ಬಳಸಿ ಮೀನು ಹಿಡಿಯಲು ತೆರಳಿದ್ದಾರೆ. ಮೀನು ಹಿಡಿಯುತ್ತಿರುವ ಸಂದರ್ಭ ಇನ್ವರ್ಟರ್ ಬ್ಯಾಟರಿ ವಿದ್ಯುತ್ ಪ್ರವಹಿಸಿ ಪ್ರಕಾಶ್ ಮೃತರಾಗಿರುವುದಾಗಿ ತಿಳಿದು ಬಂದಿದೆ.

ಸುಬ್ರಹ್ಮಣ್ಯ ಎಸ್ ಐ ಜಂಬೂರಾಜ್ ಮಹಾಜನ್ ಪೊಲೀಸರೊಂದಿಗೆ ಸ್ಥಳಕ್ಕೆ ತೆರಳಿ ತನಿಖೆ ನಡೆಸಿರುವುದಾಗಿ ತಿಳಿದು ಬಂದಿದೆ. ಮೃತರು ತಾಯಿ ಭುವನೇಶ್ವರಿ, ಪತ್ನಿ ದಿವ್ಯ ಹಾಗೂ ಪುತ್ರಿ ಹಿತಾಶ್ರೀ, ಸಹೋದರ ತೇಜಕುಮಾರ್, ಸಹೋದರಿ ಶ್ರೀಮತಿ ಸಂದ್ಯಾ ಹಾಗೂ ಬಂಧುಗಳನ್ನು ಅಗಲಿದ್ದಾರೆ.