Home ದಕ್ಷಿಣ ಕನ್ನಡ ಬಾವಿಯ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಯತ್ನ ವೇಳೆ ಬಾವಿಗೆ ಬಿದ್ದು ಮೃತ್ಯು

ಬಾವಿಯ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಯತ್ನ ವೇಳೆ ಬಾವಿಗೆ ಬಿದ್ದು ಮೃತ್ಯು

Hindu neighbor gifts plot of land

Hindu neighbour gifts land to Muslim journalist

ಉಡುಪಿ : ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವ್ಯಕ್ತಿಯೊಬ್ಬರು ನೇಣಿನ ಗಂಟು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಮಾಳ ಗ್ರಾಮದ ಮಂಜಲ್ತಾರು ಕಡಾರಿ ಬಳಿ ನಡೆದಿದೆ.

ಮೃತರನ್ನು ಕಾರ್ಕಳ ತಾಲೂಕಿನ ಮಾಳ ಗ್ರಾಮದ ಕಡಾರಿ ಬಳಿ ನಿವಾಸಿ ಸುಂದರಿ ಎಂಬವರ ಮಗ ಭೋಜ (37) ಎಂದು ಗುರುತಿಸಲಾಗಿದೆ. ಮದ್ಯಪಾನ ಮಾಡುವ ಚಟ ಹಾಗೂ ಅನಾರೋಗ್ಯದಿಂದ ಬಳಲುತ್ತಿದ್ದ ಇವರು, ಜೀವನದಲ್ಲಿ ಜುಗುಪ್ಪೆ ಹೊಂದಿ ಮನೆ ಸಮೀಪದ ಬಾವಿಯ ಹಗ್ಗದಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದರು.

ಈ ವೇಳೆ ನೇಣಿನ ಗಂಟು ಜಾರಿದ ಪರಿಣಾಮ ಅವರು ಬಾವಿಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.