Home latest ಉಪ್ಪಿನಂಗಡಿ : ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ, ಮಹಿಳೆ ಸಾವು

ಉಪ್ಪಿನಂಗಡಿ : ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ, ಮಹಿಳೆ ಸಾವು

Hindu neighbor gifts plot of land

Hindu neighbour gifts land to Muslim journalist

ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಪೆರ್ನೆ ಸಮೀಪ ಅಮೈ ಎಂಬಲ್ಲಿ ನಡೆದಿದೆ.

ಮೃತರು ಪುತ್ತೂರು ಹಾರಾಡಿಯ ಪ್ರಜ್ವಲ್ ಸ್ಟೋರ್ಸ್ ಮಾಲಕ ನೆಕ್ಕಿಲಾಡಿ ಬಾಲಕೃಷ್ಣ ಭಟ್ ಎಂಬವರ ಪತ್ನಿ ಪೂರ್ಣಿಮಾ (47) ಎಂದು ತಿಳಿದು ಬಂದಿದೆ.

ಬಾಲಕೃಷ್ಣ ದಂಪತಿ ಇಂದು ಬೆಳಗ್ಗೆ ಪೆರ್ನೆಯಲ್ಲಿರುವ ತಮ್ಮ ತೋಟಕ್ಕೆ ಹೋಗಿದ್ದರು. ಅಲ್ಲಿಂದ ದ್ವಿಚಕ್ರ ವಾಹನದಲ್ಲಿ ವಾಪಾಸಾಗುತ್ತಿದ್ದ ವೇಳೆ ಟಿಪ್ಪರ್ ವೊಂದು ಡಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡ ಪೂರ್ಣಿಮಾ ಸಾವನ್ನಪ್ಪಿದ್ದಾರೆ.

ಇತ್ತ ಡಿಕ್ಕಿ ಹೊಡೆಯುತ್ತಿದ್ದಂತೆ ಟಿಪ್ಪರ್ ಚಾಲಕ ಪರಾರಿಯಾಗಿದ್ದಾನೆ. ಮೃತ ಪೂರ್ಣಿಮಾ ಅವರ ಪತಿ ಬಾಲಕೃಷ್ಣ ಭಟ್ ಅವರಿಗೂ ಗಾಯಗಳಾಗಿದ್ದು, ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.