Home ದಕ್ಷಿಣ ಕನ್ನಡ ಉಪ್ಪಿನಂಗಡಿ : ಬೈಕ್ ಮೇಲೆ ಪಲ್ಟಿಯಾಗಿ ಬಿದ್ದ ಬೊಲೆರೋ ,ಬೈಕ್ ಸವಾರ ಸಾವು

ಉಪ್ಪಿನಂಗಡಿ : ಬೈಕ್ ಮೇಲೆ ಪಲ್ಟಿಯಾಗಿ ಬಿದ್ದ ಬೊಲೆರೋ ,ಬೈಕ್ ಸವಾರ ಸಾವು

Hindu neighbor gifts plot of land

Hindu neighbour gifts land to Muslim journalist

Uppinangadi : ಪುತ್ತೂರು : ಬೈಕ್‌ ಮೇಲೆ ಬೊಲೆರೋ ಪಲ್ಟಿಯಾಗಿ ಬಿದ್ದ ಪರಿಣಾಮ ಬೈಕ್‌ ಸವಾರ ಮೃತಪಟ್ಟ ಘಟನೆ ಬಜತ್ತೂರು ಗ್ರಾಮದ ಕೆಮ್ಮಾರದ ಓಡ್ಲದಲ್ಲಿ ಸೋಮವಾರ ನಡೆದಿದೆ.

ಕೊಯಿಲ ಗ್ರಾಮದ ಕಡೆಂಬ್ಯಾಲು ನಿವಾಸಿ, ಎಲೆಕ್ಟ್ರಿಷಿಯನ್‌ ಕೊರಗಪ್ಪ ಗೌಡ (58) ಮೃತ ವ್ಯಕ್ತಿ. ಬೆಳಗ್ಗೆ 11.30ರ ಸುಮಾರಿಗೆ ಹಳೆಗೇಟು- ಮರ್ಧಾಳ ರಾಜ್ಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಕಡಬ ಕಡೆಯಿಂದ ಕೃಷ್ಣಪ್ಪ ನಾಯ್ಕ ಅವರು ಬೊಲೆರೋ ವಾಹನವನ್ನು ಚಲಾಯಿಸಿಕೊಂಡು ಬಂದು ಓಡ್ಲ ಎಂಬಲ್ಲಿ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಸಂಚರಿಸಿ, ಒಮ್ಮೆಲೇ ಬ್ರೇಕ್‌ ಹಾಕಿದ್ದು, ಈ ಸಂದರ್ಭ ಬೊಲೆರೋ ವಾಹನ ಸ್ಕಿಡ್‌ ಆಗಿ ಪಲ್ಟಿ ಹೊಡೆದಿದೆ.

ಈ ಸಂದರ್ಭ ಉಪ್ಪಿನಂಗಡಿ (Uppinangadi) ಕಡೆಯಿಂದ ಕೆಮ್ಮಾರ ಕಡೆ ಕೊರಗಪ್ಪ ಗೌಡರು ಚಲಾಯಿಸಿಕೊಂಡು ಹೋಗು ತ್ತಿದ್ದ ಬೈಕ್‌ನ ಮೇಲೆ ಬೊಲೆರೋ ವಾಹನ ಬಿದ್ದಿದೆ.

ಆಗ ಬೈಕ್‌ ಮತ್ತು ಸವಾರ ರಸ್ತೆಗೆಸೆಯಲ್ಪಟ್ಟಿದ್ದು, ಗಂಭೀರ ಗಾಯ ಗೊಂಡ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫ‌ಲಕಾರಿಯಾಗದೆ ಅಲ್ಲಿ ಅವರು ಮೃತಪಟ್ಟಿದ್ದಾರೆ. ಈ ಬಗ್ಗೆ ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.