Home ದಕ್ಷಿಣ ಕನ್ನಡ ಬೆಂಗಳೂರು – ಮಂಗಳೂರು ನಡುವಿನ ರೈಲು ಸಂಚಾರ ರದ್ದು

ಬೆಂಗಳೂರು – ಮಂಗಳೂರು ನಡುವಿನ ರೈಲು ಸಂಚಾರ ರದ್ದು

Hindu neighbor gifts plot of land

Hindu neighbour gifts land to Muslim journalist

ಪಡೀಲ್ ಮತ್ತು ಕುಲಶೇಖರ ನಿಲ್ದಾಣಗಳ ನಡುವೆ ಜೋಡಿ ಮಾರ್ಗದ ಕಾಮಗಾರಿ ನಿರ್ವಹಿಸಲು ಗುರುವಾರದಿಂದಲೇ 18 ರೈಲುಗಳ ಸಂಚಾರವನ್ನು ನೈರುತ್ಯ ರೈಲ್ವೆ ತಾತ್ಕಾಲಿಕವಾಗಿ ರದ್ದುಗೊಳಿಸಿದೆ.

ಸುಬ್ರಹ್ಮಣ್ಯ ರಸ್ತೆ – ಮಂಗಳೂರು ಸೆಂಟ್ರಲ್ ( ಗಾಡಿ ಸಂಖ್ಯೆ 06488/06489) ಮಧ್ಯದ ಪ್ರಯಾಣಿಕರ ವಿಶೇಷ ರೈಲು, ಮಂಗಳೂರು ಸೆಂಟ್ರಲ್ – ಕಬಕ ಪುತ್ತೂರು ಪ್ರಯಾಣಿಕರ ರೈಲುಗಳು ( 06487/06486)
ಮಾ.17 ರಿಂದ 20 ರವರೆಗೆ ಇಲ್ಲ‌.

ಪುಣೆ – ಎರ್ನಾಕುಲಂ ಎಕ್ಸ್‌ಪ್ರೆಸ್‌ ರೈಲು ( 11097/11098) ಮಾ.19 ರಂದು ಮತ್ತು 21 ರಂದು ರದ್ದಾಗಿದೆ. ಯಶವಂತಪುರ – ಕಾರವಾರ ಎಕ್ಸ್‌ಪ್ರೆಸ್‌ ರೈಲುಗಳ ಸಂಚಾರ ( 16515/16516) ಮಾ.18 ಮತ್ತು 19 ರಂದು ಇರುವುದಿಲ್ಲ.

ಯಶವಂತಪುರ – ಮಂಗಳೂರು ಎಕ್ಸ್‌ಪ್ರೆಸ್‌ ರೈಲು ( 16575/16576) ಮಾ.17 ಮತ್ತು 18 ರಂದು ಇರುವುದಿಲ್ಲ. ಯಶವಂತಪುರ – ಮಂಗಳೂರು ಎಕ್ಸ್‌ಪ್ರೆಸ್‌ ( 16539/16540) ರೈಲು ಮಾ.19 ಮತ್ತು 20 ರಂದು ಸಂಚರಿಸುವುದಿಲ್ಲ.

ಬೆಂಗಳೂರು – ಕಾರವಾರ ಎಕ್ಸ್ ಪ್ರೆಸ್ ( 16595/16596), ಯಶವಂತಪುರ – ಕಣ್ಣೂರು ಎಕ್ಸ್‌ಪ್ರೆಸ್‌ ( 16511/16511) , ಕೆ ಎಸ್ ಆರ್ ಬೆಂಗಳೂರು- ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್‌ ( 16585/16586) ರೈಲುಗಳ ಸಂಚಾರ ಮಾ.19 ಮತ್ತು 20 ರಂದು ಇರುವುದಿಲ್ಲ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಅನೀಶ ಹೆಗಡೆ ತಿಳಿಸಿದ್ದಾರೆ.