Home ಬೆಂಗಳೂರು Bengaluru News: ಗಗನಸಖಿಯ ಆತ್ಮಹತ್ಯೆ ಕೇಸ್ ಗೆ ಬಿಗ್ ಟ್ವಿಸ್ಟ್! ಅಪಾರ್ಟ್‌ಮೆಂಟ್‌ನಿಂದ ತಳ್ಳಿ ನಾಟಕವಾಡಿದ್ದ ಟೆಕ್ಕಿ...

Bengaluru News: ಗಗನಸಖಿಯ ಆತ್ಮಹತ್ಯೆ ಕೇಸ್ ಗೆ ಬಿಗ್ ಟ್ವಿಸ್ಟ್! ಅಪಾರ್ಟ್‌ಮೆಂಟ್‌ನಿಂದ ತಳ್ಳಿ ನಾಟಕವಾಡಿದ್ದ ಟೆಕ್ಕಿ ಅರೆಸ್ಟ್‌

Hindu neighbor gifts plot of land

Hindu neighbour gifts land to Muslim journalist

Bengaluru air hostess murder :ತನ್ನ ಪ್ರಿಯಕರನನ್ನು ನೋಡುವ ಆಸೆಗಾಗಿ ದೂರದ ದುಬೈ(Dubai) ನಿಂದ ಬೆಂಗಳೂರಿಗೆ ಬಂದಿದ್ದ ಪ್ರತಿಷ್ಠಿತ ಅಂತಾರಾಷ್ಟ್ರೀಯ ಏರ್‌ಲೈನ್ಸ್‌ನಲ್ಲಿ ಗಗನಸಖಿ(air hostess)ಯಾಗಿ ಕೆಲಸ ಮಾಡುತ್ತಿದ್ದ ಅರ್ಚನಾ ಧೀಮನ್‌ , ಅಪಾರ್ಟ್‌ಮೆಂಟ್‌ನಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾದ ದುರ್ಘಟನೆಯೊಂದು ಕೆಲವು ದಿನಗಳ ಹಿಂದೆ ಬೆಂಗಳೂರಿ(Bangalore)ನಲ್ಲಿ ನಡೆದಿತ್ತು. ಆದರೀಗ ಈ ಪ್ರಕರಣಕ್ಕೆ ರೋಚಕವಾದ ಟ್ವಿಸ್ಟ್ ಸಿಕ್ಕಿದೆ.

ಹೌದು, ಗಗನಸಖಿ ಅತ್ಮಹತ್ಯೆ (Suicide) ಪ್ರಕರಣಕ್ಕೆ ಸ್ಟೋಟಕ ಟ್ವಿಸ್ಟ್ ಸಿಕ್ಕಿದ್ದು, ತನ್ನನ್ನು ನೋಡಲು ಬಂದಿದ್ದ ಪ್ರಿಯತಮೆಯನ್ನು ಅಪಾರ್ಟ್‌ಮೆಂಟ್‌ನಿಂದ ತಳ್ಳಿ ಪ್ರಿಯಕರನೇ ಹತ್ಯೆ (Bengaluru air hostess murder) ಮಾಡಿರುವ ವಿಷಯ ಈಗ ವಿಚಾರಣೆಯಿಂದ ಬೆಳಕಿಗೆ ಬಂದಿದೆ.

ಅರ್ಚನಾ ಧೀಮನ್‌(Archana Dhiman) ಹಿಮಾಚಲ ಮೂಲದವರಾಗಿದ್ದು ಕೇರಳ(Kerala) ಮೂಲದ ಟೆಕ್ಕಿ ಆದೇಶ್‌(Adesh) ಎನ್ನುವವರನ್ನು ಪ್ರೀತಿ ಮಾಡುತ್ತಿದ್ದರು. ಆದೇಶ್ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಟೆಕ್ಕಿಯಾಗಿ ಕೆಲಸ ಮಾಡಿಕೊಂಡಿದ್ದ. ಡೇಟಿಂಗ್ ಆ್ಯಪ್ ಮೂಲಕ ಗಗನಸಖಿ ಅರ್ಚನಾ ಹಾಗೂ ಆದೇಶ್ ಪರಿಚಯವಾಗಿ ಇಬ್ಬರಿಗೂ ಲವ್ ಆಗಿದೆ.

ಕಳೆದ ಮೂರು ತಿಂಗಳಿನಿಂದ ಪ್ರಿಯಕರ ಆದೇಶ್, ಪ್ರಿಯತಮೆ ಅರ್ಚನಾಳ ಜೊತೆ ಸಂಬಂಧ ಕಡಿದುಕೊಳ್ಳಲು ಮುಂದಾಗಿದ್ದ. ಆದೇಶ್‌ ಮೊದಲಿನಂತೆ ಮಾತನಾಡದ್ದಕ್ಕೆ ಬೇಸರಗೊಂಡಿದ್ದ ಹಿಮಾಚಲ ಪ್ರದೇಶದ ಮೂಲದ ಅರ್ಚನಾ ದುಬೈನಿಂದ ಗೆಳೆಯನನ್ನು ನೋಡಲು ಬೆಂಗಳೂರಿನ ಕೋರಮಂಗಲದ (Koramangala) ನಾಲ್ಕನೇ ಹಂತದಲ್ಲಿರುವ ಮನೆಗೆ ಬಂದಿದ್ದಳು.

ಮಾರ್ಚ್‌ 10 ರಂದು ರಾತ್ರಿ ಇಬ್ಬರು ಪೋರಂ ಮಾಲ್’ಗೆ ಹೋಗಿ ಸಿನಿಮಾ ನೋಡಿಕೊಂಡು ಬಂದಿದ್ದಾರೆ. ತಡರಾತ್ರಿಯವರೆಗೂ ಇಬ್ಬರು ಪಾರ್ಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಅರ್ಚನಾ ಮದುವೆ ವಿಚಾರವನ್ನು ಪ್ರಸ್ತಾಪ ಮಾಡಿದ್ದಳು. ಈ ವಿಚಾರವಾಗಿ ಇಬ್ಬರ ಮಧ್ಯೆ ಜೋರು ಗಲಾಟೆ ನಡೆದಿದೆ. ಆದೇಶ್ ಪರಸ್ಪರ ಕಿತ್ತಾಡಿಕೊಂಡಿದ್ದಾರೆ.

ಈ ಗಲಾಟೆ ವಿಕೋಪಕ್ಕೆ ಹೋಗಿದ್ದರಿಂದ ರಾತ್ರಿ 12 ಗಂಟೆಯ ವೇಳೆಗೆ ಆದೇಶ್, ಅರ್ಚನಾಳನ್ನು ಜೋರಾಗಿ ಹಿಂದಕ್ಕೆ ತಳ್ಳಿದ್ದ. ಪರಿಣಾಮ ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದ ಅರ್ಚನಾ ಸ್ಥಳದಲ್ಲೇ ಸಾವನ್ನಪ್ಪಿದ್ದಳು. ಮೃತ ಯುವತಿ ತಂದೆ ದೇವರಾಜ್ ಅವರು ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿ ಆದೇಶ್‌ ವಿರುದ್ಧ ದೂರು ನೀಡಿದ್ದು ಕೋರಮಂಗಲ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿದೆ. ಪೊಲೀಸರು ಈಗ ಆದೇಶ್‌ನನ್ನು ಬಂಧಿಸಿದ್ದು ತನಿಖೆ ಮುಂದುವರಿಸಿದ್ದಾರೆ.