Home ಬೆಂಗಳೂರು ಕೇಂದ್ರ ಸರ್ಕಾರದ ಸಚಿವರೊಬ್ಬರ ಮನೆಯ ಮುಂದೆಯೇ ನಡೆಯಿತು ಭೀಕರ ಕೊಲೆ!! ಕೋರ್ಟ್ ಗೆ ತೆರಳಿ ವಾಪಾಸ್ಸಾಗುತ್ತಿದ್ದಾಗ...

ಕೇಂದ್ರ ಸರ್ಕಾರದ ಸಚಿವರೊಬ್ಬರ ಮನೆಯ ಮುಂದೆಯೇ ನಡೆಯಿತು ಭೀಕರ ಕೊಲೆ!! ಕೋರ್ಟ್ ಗೆ ತೆರಳಿ ವಾಪಾಸ್ಸಾಗುತ್ತಿದ್ದಾಗ ರಿಯಲ್ ಎಸ್ಟೇಟ್ ಉದ್ಯಮಿಯ ಮಚ್ಚಿನಿಂದ ಕಡಿದು ಕೊಂದ ದುಷ್ಕರ್ಮಿಗಳು!!!

Hindu neighbor gifts plot of land

Hindu neighbour gifts land to Muslim journalist

ದುಷ್ಕರ್ಮಿಗಳ ಮಚ್ಚಿನೇಟಿಗೆ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ಬರ್ಬರವಾಗಿ ಸಾವನ್ನಪ್ಪಿದ್ದ ಘಟನೆ ಬೆಂಗಳೂರಿನ ಆನೇಕಲ್ ನ ಶಿವಾಜಿ ವೃತ್ತದ ಬಳಿ ನಡೆದಿದ್ದು,ಮೃತ ವ್ಯಕ್ತಿಯನ್ನು ರಾಜಶೇಖರ್ ರೆಡ್ಡಿ ಎಂದು ಗುರುತಿಸಲಾಗಿದೆ.

ತನ್ನ ಜಾಮೀನಿನ ವಿಚಾರದಲ್ಲಿ ಕೋರ್ಟ್ ಗೆ ತೆರಳಿ ಮರಳುತ್ತಿದ್ದಾಗ ಈ ಘಟನೆ ನಡೆದಿದ್ದು, ಮೂರು ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಒಂದು ಸುತ್ತು ಗುಂಡು ಹಾರಿಸಿ ಆ ಬಳಿಕ ಮಚ್ಚಿನಿಂದ ಹಿಗ್ಗಾ ಮುಗ್ಗ ಕಡಿದಿದ್ದಾರೆ ಎನ್ನಲಾಗಿದೆ.

ಕೇಂದ್ರದ ಮಂತ್ರಿಯೊಬ್ಬರ ಮನೆಯ ಮುಂದೆಯೇ ಈ ಘಟನೆ ನಡೆದಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ರೆಡ್ಡಿ ಯ ಪ್ರಾಣಪಕ್ಷಿ ಸ್ಥಳದಲ್ಲೇ ಹಾರಿಹೋಗಿತ್ತು. ಘಟನೆ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಚುರುಕುಗೊಂಡಿದೆ.