Home Karnataka State Politics Updates ಶೀಘ್ರದಲ್ಲೇ ಮಸೂದ್, ಫಾಝಿಲ್ ಮನೆಗೆ ಭೇಟಿ ನೀಡುತ್ತೇನೆ : ಸಿಎಂ ಬಸವರಾಜ್ ಬೊಮ್ಮಾಯಿ

ಶೀಘ್ರದಲ್ಲೇ ಮಸೂದ್, ಫಾಝಿಲ್ ಮನೆಗೆ ಭೇಟಿ ನೀಡುತ್ತೇನೆ : ಸಿಎಂ ಬಸವರಾಜ್ ಬೊಮ್ಮಾಯಿ

Hindu neighbor gifts plot of land

Hindu neighbour gifts land to Muslim journalist

ಕರಾವಳಿ ನಿಧಾನಕ್ಕೆ ಚೇತರಿಸಿತ್ತಿದೆ. ಆದರೂ ಜನರಿಗೆ ಭಯ ಇನ್ನೂ ಹೋಗಿಲ್ಲ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯ ಬಿಸಿ ಆರುವ ಮೊದಲೇ ಫಾಝಿಲ್ ಎನ್ನುವ ಯುವಕನ ಬರ್ಬರ ಕೊಲೆಯಾಗುತ್ತೆ. ಈ ಎಲ್ಲಾ ಹತ್ಯೆಗಳ ಪ್ರಕರಣ ತನಿಖೆಯಲ್ಲಿದೆ.

ರಾಜ್ಯದ ಮಾನ್ಯಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿ ನಂತರ ಈ ಹತ್ಯೆಯ ತನಿಖೆಯನ್ನು NIA ಗೆ ವಹಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರಾವಳಿಯ ಸರಣಿ ಹತ್ಯೆ ಪ್ರಕರಣ ತನಿಖೆ ಪ್ರಗತಿಯಲ್ಲಿದೆ. ಆದಷ್ಟು ಬೇಗ ಕೊಲೆಗಡುಕರನ್ನು ಬಂಧಿಸುತ್ತೇವೆ. ಪ್ರವೀಣ್ ಹತ್ಯೆ ಪ್ರಕರಣ ಎನ್‌ಐಎಗೆ ಹಸ್ತಾಂತರ ಪ್ರಕ್ರಿಯೆ ನಡೆಯುತ್ತಿದೆ.
ಅದಕ್ಕೆ ಸಂಬಂಧಿಸಿದಂತೆ ಪೇಪರ್ ಕೆಲಸಗಳು ನಡೆಯುತ್ತಿದೆ. ಅನೌಪಚಾರಿಕವಾಗಿ ಎನ್‌ಐಎಗೆ ತಿಳಿಸಿದ್ದೇವೆ. ಆ ಪ್ರಕಾರ ಈಗಾಗಲೇ ಎನ್‌ಐಎ ಅಧಿಕಾರಿಗಳು ಕೇರಳ, ಮಂಗಳೂರಿನಲ್ಲಿ ಪ್ರಾಥಮಿಕ ಮಾಹಿತಿ ಕಲೆ ಹಾಕುತ್ತಿದ್ದಾರೆ‌. ಆ ಪ್ರಕಾರ ಈಗಾಗಲೇ ಎನ್‌ಐಎ ಅಧಿಕಾರಿಗಳು ಕೇರಳ, ಮಂಗಳೂರಿನಲ್ಲಿ ಪ್ರಾಥಮಿಕ ಮಾಹಿತಿ ಕಲೆ ಹಾಕುತ್ತಿದ್ದಾರೆ. ಎಂಬ ಮಾಹಿತಿಯನ್ನು ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ಹತ್ಯೆಯಾದ ಮಸೂದ್, ಫಾಝಿಲ್ ಮನೆಗೆ ಭೇಟಿ ನೀಡುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.