Home ಬೆಂಗಳೂರು ಅತಿಥಿ ಉಪನ್ಯಾಸಕರ ನೇಮಕಕ್ಕೆ ಭಾರೀ ಸ್ಪಂದನೆ | 30 ಸಾವಿರಕ್ಕೂ ಹೆಚ್ಚು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್...

ಅತಿಥಿ ಉಪನ್ಯಾಸಕರ ನೇಮಕಕ್ಕೆ ಭಾರೀ ಸ್ಪಂದನೆ | 30 ಸಾವಿರಕ್ಕೂ ಹೆಚ್ಚು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು : 2021-22ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ರಾಜ್ಯದಲ್ಲಿ ಆರಂಭಿಸಿರುವ ಅತಿಥಿ ಉಪನ್ಯಾಸಕರ ನೇಮಕ ಪ್ರಕ್ರಿಯೆಗೆ ಭಾರೀ ಸ್ಪಂದನೆ ವ್ಯಕ್ತವಾಗಿದೆ.

ಗುರುವಾರದವರೆಗೆ 30 ಸಾವಿರಕ್ಕೂ ಹೆಚ್ಚು ಅರ್ಹ ಅಭ್ಯರ್ಥಿಗಳು ಆನ್-ಲೈನ್ ಮೂಲಕ ಅರ್ಜಿ ಹಾಕಿಕೊಂಡಿದ್ದಾರೆ ಎಂದು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಅವರು, ರಾಜ್ಯ ಸರ್ಕಾರವು ಇತ್ತೀಚೆಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಬಳವನ್ನು ಎರಡೂವರೆ ಪಟ್ಟಿಗಿಂತ ಹೆಚ್ಚು ಏರಿಸಿದೆ. ಇದು ಅರ್ಹ ಅಭ್ಯರ್ಥಿಗಳಲ್ಲಿ ಸಕಾರಾತ್ಮಕ ಪರಿಣಾಮವನ್ನು ಉಂಟುಮಾಡಿದೆ ಎನ್ನುವುದಕ್ಕೆ ಇಷ್ಟೊಂದು ಪ್ರಮಾಣದಲ್ಲಿ ಅರ್ಜಿಗಳು ಬಂದಿರುವುದೇ ಸಾಕ್ಷಿ ಎಂದಿದ್ದಾರೆ.

ಅಲ್ಲದೆ, ಅರ್ಜಿ ಹಾಕಿಕೊಳ್ಳಲು ಶುಕ್ರವಾರ ಮಧ್ಯರಾತ್ರಿ 12 ಗಂಟೆಯವರೆಗೂ ಅವಕಾಶವಿದೆ. ಇದುವರೆಗೂ ಅರ್ಜಿ ಹಾಕದೆ ಇರುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಇಂಥವರು https://dec.karnataka/gov.in ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಅವರು ಹೇಳಿದ್ದಾರೆ.

ಸರ್ಕಾರವು ಕಳೆದ ವಾರ ಅತಿಥಿ ಉಪನ್ಯಾಸಕರ ವೇತನವನ್ನು ಗರಿಷ್ಠ 32 ಸಾವಿರ ರೂ.ವರೆಗೂ ಹೆಚ್ಚಳ ಮಾಡಿ ಆದೇಶ ಹೊರಡಿಸಿರುವುದನ್ನು ಇಲ್ಲಿ ನೆನೆಯಬಹುದು.