Home » ವೇಶ್ಯಾಗೃಹದ ದಾಳಿ ಸಂದರ್ಭದಲ್ಲಿ ಸಿಕ್ಕಿಬಿದ್ದ ಗ್ರಾಹಕನನ್ನು ಬಂಧಿಸುವಂತಿಲ್ಲ ; ಕರ್ನಾಟಕ ಹೈಕೋರ್ಟ್ ಆದೇಶ

ವೇಶ್ಯಾಗೃಹದ ದಾಳಿ ಸಂದರ್ಭದಲ್ಲಿ ಸಿಕ್ಕಿಬಿದ್ದ ಗ್ರಾಹಕನನ್ನು ಬಂಧಿಸುವಂತಿಲ್ಲ ; ಕರ್ನಾಟಕ ಹೈಕೋರ್ಟ್ ಆದೇಶ

by Mallika
0 comments

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು : ವೇಶ್ಯಾವಾಟಿಕೆ ನಡೆಯುವ ಸ್ಥಳದಲ್ಲಿ ಪತ್ತೆಯಾದ ಗ್ರಾಹಕನ ವಿರುದ್ಧ ಮಾನವ ಕಳ್ಳಸಾಗಣೆ ತಡೆ ಕಾಯ್ದೆಯಡಿ ಶಿಕ್ಷೆ ನೀಡಲು ಕಾನೂನಿನಲ್ಲಿ ಅವಕಾಶ ಇಲ್ಲ ಎಂದು ಹೈಕೋರ್ಟ್‌ ಹೇಳಿದೆ.

ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ಅರ್ಜಿದಾರರು ವೇಶ್ಯಾಗೃಹದಲ್ಲಿ ಗ್ರಾಹಕರು. ಈ ವ್ಯಕ್ತಿ ವೇಶ್ಯಾಗೃಹಕ್ಕೆ ಹೋದಾಗಲೇ ಅಲ್ಲಿ ದಾಳಿ ನಡೆದಿತ್ತು. ಹೀಗಾಗಿ, ಆತನನ್ನು ಕೂಡ ಬಂಧಿಸಿ, ಆತನ ವಿರುದ್ಧ ಸೆಕ್ಷನ್ 3 (ವೇಶ್ಯಾಗೃಹ ಇರಿಸುವ ಶಿಕ್ಷೆ ಅಥವಾ ಆವರಣವನ್ನು
ವೇಶ್ಯಾವಾಟಿಕೆಯಾಗಿ ಬಳಸಲು ಅನುಮತಿ), ಐಪಿಸಿ ಸೆಕ್ಷನ್ 4 (ವೇಶ್ಯಾವಾಟಿಕೆಯ ಗಳಿಕೆಯ ಮೇಲೆ ಜೀವನ), ಸೆಕ್ಷನ್ 5 (ವೇಶ್ಯಾವಾಟಿಕೆಗಾಗಿ ವ್ಯಕ್ತಿಯನ್ನು ಪ್ರೇರೇಪಿಸುವುದು ಅಥವಾ ಕರೆದೊಯ್ಯುವುದು) ಮತ್ತು ಅನೈತಿಕ ಸಂಚಾರ ತಡೆ ಕಾಯ್ದೆ (ITPA) ಮತ್ತು ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 370 (ವ್ಯಕ್ತಿಗಳ ಕಳ್ಳಸಾಗಣೆ) ಸೆಕ್ಷನ್ 6 (ವೇಶ್ಯಾವಾಟಿಕೆ ನಡೆಸುವ ಆವರಣದಲ್ಲಿ ವ್ಯಕ್ತಿಯನ್ನು ಬಂಧಿಸುವುದು) ಕೇಸ್ ದಾಖಲಿಸಲಾಗಿತ್ತು.

ಹೈಕೋರ್ಟ್ ನ್ಯಾಯಪೀಠ, ಆರೋಪಿ ತಾನು ಹೋಗಿ ವೇಶ್ಯಾವಾಟಿಕೆಗೆ ಕುಮ್ಮಕ್ಕು ನೀಡಿದಂತಾದರೂ ಶಿಕ್ಷಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಆರೋಪಿ ಸಲ್ಲಿಸಿದ ಮನವಿ ಪುರಸ್ಕರಿಸಿರುವ ನ್ಯಾಯಾಲಯ ಅವರ ಮೇಲಿದ್ದ ಪ್ರಕರಣ ವಜಾ ಮಾಡಿದೆ.

You may also like

Leave a Comment